ಪ್ರಜ್ವಲ್ ಲೈಂಗಿಕ ಹಗರಣ | ಗನ್ ತೋರಿಸಿ ಜಿ.ಪಂ ಮಾಜಿ ಸದಸ್ಯೆ ಮೇಲೆ 3 ವರ್ಷ ನಿರಂತರ ಅತ್ಯಾಚಾರ

Date:

Advertisements

ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ ಮೂರು ವರ್ಷಗಳ ಕಾಲ ನಿರಂತರವಾಗಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಿದೆ.

ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1691 ಪುಟಗಳ ಚಾರ್ಜ್‌ಶೀಟ್‌ಅನ್ನು ಶುಕ್ರವಾರ ಸಲ್ಲಿಸಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಗೆ ಆಕೆಯ ಗಂಡನನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ, ಆಕೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದೆ.

ಹಾಸನದ ರೇಸ್‌ಕೋರ್ಸ್‌ ರಸ್ತೆಯಲ್ಲಿ ಅತಿಥಿ ಗೃಹಕ್ಕೆ ಸಂತ್ರಸ್ತೆಯನ್ನು ಕರೆಸಿಕೊಂಡಿದ್ದ ಪ್ರಜ್ವಲ್, ಆಕೆಗೆ ಗನ್‌ ತೋರಿಸಿ, ಗಂಡನನ್ನು ಕೊಲ್ಲುವುದಾಗಿ ಬೆದರಿಸಿ, ಅತ್ಯಾಚಾರ ಎಸಗಿದ್ದಾನೆ. ಆ ನಂತರ, 2020ರಿಂದ 2023ರವರೆಗೆ ಹಲವಾರು ಬಾರಿ ತನ್ನ ನಿವಾಸಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಆಗ್ಗಾಗ್ಗೆ ವಿಡಿಯೋ ಕಾಲ್ ಮಾಡಿಯೂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಚಾರ್ಜ್‌ಶೀಟ್‌ನಲ್ಲಿ ಎಸ್‌ಐಟಿ ವಿವರಿಸಿದೆ.

Advertisements

ಅತ್ಯಾಚಾರದ ವೇಳೆ ಸಂತ್ರಸ್ತೆಗೆ ಅಳಬಾರದು, ನಗಬೇಕು ಎಂದು ಹಾಗೂ ತಾನು ಹೇಳಿದ ಉಡುಗೆಗಳನ್ನು ಧರಿಸಿಕೊಳ್ಳುವಂತೆ ಪೀಡಿಸಿ ವಿಕೃತಿ ಮೆರೆದಿದ್ದಾನೆ. ತನ್ನ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಡಿದ್ದಾನೆ. ಕೃತ್ಯದ ಬಗ್ಗೆ ಯಾರಿಗಾದರೂ ತಿಳಿಸಿದರೆ, ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾನೆ. ಆತನ ವಿರುದ್ಧದ ಆರೋಪ ದೃಢಪಟ್ಟಿದೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X