ಮದುವೆಯಾಗುವುದಾಗಿ ನಂಬಿಸಿ 77 ಮಹಿಳೆಯರಿಗೆ ವಂಚನೆ; ದುಷ್ಕರ್ಮಿ ಬಂಧನ

Date:

Advertisements

ಮದುವೆಯಾಗುವುದಾಗಿ ನಂಬಿಸಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದ್ದ ದುಷ್ಕರ್ಮಿಯನ್ನು ಒರಿಸ್ಸಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಒರಿಸ್ಸಾದ ಅಂಗುಲ್‌ ಜಿಲ್ಲೆಯ ಚೆಂಡಿಪಾಡಾ ಮೂಲದ ಬಿರಂಚಿ ನಾರಾಯಣನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಸುಮಾರು 7 ರಾಜ್ಯಗಳಲ್ಲಿ ಮಹಿಳೆಯನ್ನು ವಂಚಿಸಿದ್ದಾನೆ. ಆತನ ಮೊಬೈಲ್‌ಅನ್ನು ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿಯು ಮಹಿಳೆಯರೊಂದಿಗೆ ನಿಕಟವಾಗಿ ತೆಗೆದುಕೊಂಡಿರುವ 300ಕ್ಕೂ ಹೆಚ್ಚು ಫೋಟೋಗಳನ್ನು ಕಂಡುಕೊಂಡಿದ್ದಾರೆ ಎಂದು ವರದಿಯಾಗಿದೆ.

ಆರೋಪಿ ಬಿರಂಚಿ 2013ರಿಂದಲೂ ಇಂತಹ ವಂಚನೆಗಳನ್ನು ಮಾಡುತ್ತಿದ್ದಾನೆ. ಒರಿಸ್ಸಾ ಮಾತ್ರವಲ್ಲದೆ ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಹಾಗೂ ದೆಹಲಿಯಲ್ಲಿ ಮಹಿಳೆಯರಿಗೆ ವಂಚಿಸಿದ್ದಾನೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Advertisements

ಅಲ್ಲದೆ, ಹಲವಾರು ಮಹಿಳೆಯರನ್ನು ಮದುವೆಯಾಗಿ, ಅವರಿಂದ ಹಣ ಹಾಗೂ ಚಿನ್ನಾಭರಣೆ ಸುಲಿಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಒರಿಸ್ಸಾದ ಬೈದ್ಯನಾಥಪುರ, ಜರ್ಪದ, ಬಾಲಸೋರ್ ಸದರ್, ಛೇಂಡ್, ಧೆಂಕನಲ್ ಟೌನ್, ನಯಾಪಲ್ಲಿ, ಬಲಿಪಟ್ನಾ ಹಾಗೂ ಅಂಗುಲ್ ಟೌನ್ ಪೊಲೀಸ್ ಠಾಣೆಗಳಲ್ಲಿ ಕನಿಷ್ಠ 9 ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಗಳಲ್ಲಿ ಮೂರಕ್ಕೂ ಹೆಚ್ಚು ಬಾರಿ ಆತ ಜೈಲು ಶಿಕ್ಷೆ ಅನುಭವಿಸಿದ್ದಾನೆ ಎಂದು ವರದಿಯಾಗಿದೆ.

ನಾಲ್ಕು ಭಾಷೆಗಳಲ್ಲಿ ಸ್ಪಷ್ಟ ಮತ್ತು ನಿರರ್ಗಳವಾಗಿ ಮಾತನಾಡುವ ಆರೋಪಿ, ವಿವಾಹ ಸಂಬಂಧಿತ ಸೈಟ್‌ಗಳಲ್ಲಿ ಮಧ್ಯವಯಸ್ಸಿನ ಮಹಿಳೆಯರು, ವಿಚ್ಛೇದನ ಪಡೆದ ಮಹಿಳೆಯರು ಹಾಗೂ ವಿಧವೆಯನ್ನು ಗುರಿಯಾಗಿಸಿಕೊಂಡಿದ್ದ. ಅವರನ್ನು ಪರಿಚಯ ಮಾಡಿಕೊಂಡು, ಸಲುಗೆ ಬೆಳೆಸಿ, ವಿವಾಹವಾಗುವುದಾಗಿ ನಂಬಿಸಿ ಸುಲಿಗೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X