ರಾಮನಗರ | ಹಾಲಿನ ದರ ಹೆಚ್ಚಿಸುವ ನಿರ್ಧಾರ ಸ್ವಾಗತಾರ್ಹ: ರೈತ ಸಂಘ

Date:

Advertisements

ಮುಖ್ಯಮಂತ್ರಿಗಳು ಮಾಗಡಿಯಲ್ಲಿ ಮಾತನಾಡುತ್ತಾ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ, ಆ ಹಣವನ್ನ ಹಾಲು ಉತ್ಪಾದಕ ರೈತರಿಗೆ ಕೊಡುತ್ತೇನೆಂದು ಘೋಷಣೆ ಮಾಡಿರುವುದನ್ನು ಸ್ವಾಗತಿಸುತ್ತೇವೆ ಎಂದು ರೈತಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಹರ್ಷ ವ್ಯಕ್ತಪಡಿಸಿದರು.

ಅವರು ಸೆ.14ರ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರೈತ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಒಳ್ಳೆಯ ನಿರ್ಧಾರ. ಆದರೆ ಹಾಲು ಒಕ್ಕೂಟ ಹಾಗು ಮುಖ್ಯಮಂತ್ರಿಗಳು ತಮ್ಮ ಮಾತಿಗೆ ತಪ್ಪಬಾರದೆಂದು ಎಂದು ಎಚ್ಚರಿಸಿದರು.

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರರಾದ ಕುಮಾರಸ್ವಾಮಿ ಮಾತನಾಡುತ್ತ, ಈಗಲಾದರೂ ಮುಖ್ಯಮಂತ್ರಿಗಳಿಗೆ ರೈತರ ಮೇಲೆ ಕಾಳಜಿ ಇಟ್ಟು ಹಾಲಿನ ಪ್ಯಾಕೆಟ್ ದರವನ್ನು ಹೆಚ್ಚಿಸಿ ರೈತರಿಗೆ ಕೊಡುವುದಾಗಿ ಹೇಳಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದರು.

Advertisements
WhatsApp Image 2024 09 14 at 5.44.08 PM 1

ಈ ಹಿಂದೆ ಹಲವಾರು ಬಾರಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಲಾದರೂ ನುಡಿದಂತೆ ನಡೆಯಬೇಕು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂಬ ಹೇಳಿಕೆ ಸರಿಯಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡದೆ ರೈತರ ಪರವಾಗಿ ನಿಲ್ಲಬೇಕು. ರೈತ ಸಂಕಷ್ಟದಲ್ಲಿ ಇರುವ ಈ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಸ್ವಾಗತಿಸಬೇಕು ಸರಕಾರ ಮಾತಿಗೆ ತಪ್ಪಿದರೆ ನಮ್ಮ ಹೋರಾಟ ನಿರಂತರ ಎಂದರು.

ಇದನ್ನು ಓದಿದ್ದೀರಾ? ನಾಗಮಂಗಲ | ರಾಜಕೀಯ ಪಿತೂರಿಗಳಿಂದ ಕೋಮುಗಲಭೆ ಸೃಷ್ಟಿ: ಎಸ್ ಹೆಚ್ ಲಿಂಗೇಗೌಡ ಆರೋಪ

ಇದೇ ಸಂದರ್ಭದಲ್ಲಿ ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾದ್ಯಕರಾದ ಕನ್ನಡ ಭಾಸ್ಕರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X