ಮಂಡ್ಯ | ಗಣಂಗೂರು ಟೋಲ್ ಬಳಿ ಹಾಳಾಗಿರುವ ಸರ್ವೀಸ್ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ

Date:

Advertisements

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್‌ ಬಳಿಯ 500 ಮೀಟರ್ ಹಿಂದೆ ಸರ್ವೀಸ್ ರಸ್ತೆಯಲ್ಲಿ ಬಿದ್ದಿರುವ ದೊಡ್ಡಗುಂಡಿ ರಸ್ತೆಯ ಅಪಾಯವನ್ನು ಉಂಟುಮಾಡುತ್ತಿದೆ.

ಈ ಸ್ಥಳದಲ್ಲಿ ಕ್ರಷರ್, ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಿದ್ದು, ವೇಗವಾಗಿ ಬರುವ ವಾಹನಗಳಿಗೆ ಗುಂಡಿ ಸ್ಪಷ್ಟವಾಗಿ ಕಾಣುವುದಿಲ್ಲ. ಬೈಕ್ ಸವಾರರು ತಮ್ಮ ಕುಟುಂಬ ಸದಸ್ಯರು, ಮಕ್ಕಳು, ವಯಸ್ಸಾದವರು ಸೇರಿದಂತೆ ಎಲ್ಲರನ್ನೂ ಕೂರಿಸಿಕೊಂಡು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಸ್ವಲ್ಪ ಜಾಗೃತಿ ತಪ್ಪಿದರೆ, ಅಪಘಾತಗಳ ಸಂಭವ ಹಾಗೂ ಸಾವು ಖಚಿತವಾಗಿದೆ.

ರಸ್ತೆಯ ಮೇಲೆ ನೀರು ಹರಿಯುವ ಕಾರಣದಿಂದಾಗಿ ಬೃಹತ್‌ ಲೋಡು ತುಂಬಿದ ಲಾರಿಗಳು ರಸ್ತೆಯನ್ನು ಇನ್ನಷ್ಟು ಹಾಳು ಮಾಡುತ್ತಿವೆ. ಸರ್ವೀಸ್‌ ರಸ್ತೆಯಲ್ಲಿನ ವಾಹನ ಸವಾರರೂ ಕೂಡ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ. ಆದರೆ, ಹೆದ್ದಾರಿ ರಸ್ತೆಯಲ್ಲಿ ಸಂಚರಿಸುವ ಶ್ರೀಮಂತರ ಜೀವಗಳು ಮಾತ್ರ ಅಮೂಲ್ಯವೆಂದು ಕಾಣಲಾಗುತ್ತಿದೆ. ಸರ್ವೀಸ್ ರಸ್ತೆಯಲ್ಲಿ ಸಂಚರಿಸುವ ಸಾಮಾನ್ಯರ ಪ್ರಾಣಗಳು ಕನಿಷ್ಠವೆಂದು ನಿರ್ಲಕ್ಷ್ಯ ಮಾಡುತ್ತಿರುವ ಎನ್‌ಎಚ್‌ಐ ಇಲಾಖೆಯ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಯಾಕೆ ದಂಡ ವಿಧಿಸಲಾಗುವುದಿಲ್ಲ” ಎಂಬುದು ಪ್ರಶ್ನೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಶಾಸಕ ಮುನಿರತ್ನ ರಾಜೀನಾಮೆಗೆ ಡಿಎಸ್‌ಎಸ್‌ ಒತ್ತಾಯ

ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರ್‌ಟಿಒ ಕಚೇರಿಗಳು ಸಾಮಾನ್ಯ ಜನರ ಮೇಲೆ ಮಾತ್ರ ದಂಡ ವಿಧಿಸುತ್ತಿರುವ ಬದಲಿಗೆ, ಇಂತಹ ಅಪಾಯಕಾರಿ ಸ್ಥಿತಿಗಳನ್ನು ನಿರ್ಲಕ್ಷಿಸುವವರ ಮೇಲೂ ಕ್ರಮ ತೆಗೆದುಕೊಳ್ಳಬೇಕು.

Untitled 24
ನಗರಕೆರೆ ಜಗದೀಶ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X