ಎರಡು ದಿನಗಳಲ್ಲಿ ರಾಜೀನಾಮೆ ನೀಡುವೆ: ಅರವಿಂದ್‌ ಕೇಜ್ರಿವಾಲ್‌ ಘೋಷಣೆ

Date:

Advertisements

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಎರಡು ದಿನಗಳಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದು ತಿಹಾರಿ ಜೈಲಿನಿಂದ ಬಂದ ಒಂದು ದಿನದ ನಂತರ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಪಕ್ಷದ ಸಭೆಯ ನಂತರ ಮಾತನಾಡಿದ ಅವರು, ಎಎಪಿ ಭವಿಷ್ಯವು ಈಗ ದೆಹಲಿ ಜನತೆ ಕೈಯಲ್ಲಿ ಎಂದು ಹೇಳಿರುವ ಕೇಜ್ರಿವಾಲ್ ಈಗಿನ ಬಿಜೆಪಿ ಸರ್ಕಾರದ ಆಡಳಿತ ಆಂಗ್ಲರ ಕಾನೂನಿಗಿಂತ ಕೆಟ್ಟದಾಗಿದೆ. ಜನರ ತೀರ್ಪು ನೀಡುವವರೆಗೂ ನಾನು ವಿರಮಿಸುವುದಿಲ್ಲ. ನಮ್ಮ ಬಂಡೆಯಂತಹ ಸಂಕಲ್ಪವನ್ನು ಕೇಂದ್ರ ಸರ್ಕಾರದ ಪಿತೂರಿಗಳಿಂದ ಮುರಿಯಲು ಸಾಧ್ಯವಿಲ್ಲ. ಎಂದು ತಿಳಿಸಿದ್ದಾರೆ.

ದೆಹಲಿಯ ಪ್ರತಿ ಮನೆ ಪ್ರತಿ ಬೀದಿಗೂ ತೆರಳುವೆ. ಜನರಿಂದ ತೀರ್ಪು ಸ್ವೀಕರಿಸುವವರೆಗೂ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ನಾನು ಜೈಲಿನಲ್ಲಿದ್ದಾಗ ಸ್ವತಂತ್ರ ದಿನಾಚರಣೆ ಸಂದರ್ಭದಲ್ಲಿ ಸಚಿವೆ ಅತಿಶಿ ಅವರಿಂದ ಧ್ವಜಾರೋಹಣ ಮಾಡಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಅವರಿಗೆ ಪತ್ರ ಬರೆದಿದ್ದೆ.ಆದರೆ ಪತ್ರವು ಯಾವುದೇ ಉತ್ತರವಿಲ್ಲದೆ ವಾಪಸ್‌ ಬಂದಿತು. ಇನ್ನೊಮ್ಮೆ ಪತ್ರ ಬರೆದರೆ ನಿಮ್ಮ ಕುಟುಂಬದವರನ್ನು ಭೇಟಿ ಮಾಡಿಸಲು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಲಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ದೆಹಲಿ ಅಬಕಾರಿ ಹಗರಣದಲ್ಲಿ ಸೆರೆಮನೆಯಲ್ಲಿರುವ ಸತ್ಯೇಂದ್ರ ಜೈನ್‌ ಅಮಾನುತ್ತುಲ್ಲ ಖಾನ್‌ ಅವರಿಗೂ ಧನ್ಯವಾದ ತಿಳಿಸಿದ ಕೇಜ್ರಿವಾಲ್‌ ಅವರು ಶೀಘ್ರದಲ್ಲೇ ಅವರು ಕೂಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಾಗಿ ಜೈಲಿಗೋದರೂ ರಾಜೀನಾಮೆ ನೀಡಿರಲಿಲ್ಲ.ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇರಳ ಸಿಎಂ ಪಿಣರಾಯಿ ವಿಜಯನ್‌ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧವು ಪ್ರಕರಣಗಳನ್ನು ದಾಖಲಿಸಲಾಗಿದೆ. ನಾನು ಬಿಜೆಪಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ನಿಮ್ಮ ಮೇಲೆ ಪ್ರಕರಣ ದಾಖಲಾದರೂ ರಾಜೀನಾಮೆ ನೀಡಬೇಡಿ. ಇದು ಬಿಜೆಪಿಯ ಹೊಸ ಆಟವಾಗಿದೆ ಎಂದು ತಿಳಿಸಿದ್ದಾರೆ

ದೆಹಲಿ ವಿಧಾನಸಭೆ ಚುನಾವಣೆ 2025ರ ಫೆಬ್ರವರಿಯಲ್ಲಿ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X