ತುಮಕೂರು | ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ : ಗೃಹ ಸಚಿವ ಪರಮೇಶ್ವರ್

Date:

Advertisements

ದೂರಿನ ಆಧಾರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಈಗ ತನಿಖೆ ಆರಂಭವಾಗಿದೆ. ಇಂದು ಬೆಳಿಗ್ಗೆ ಪೊಲೀಸರು ನ್ಯಾಯಾಧೀಶರ ಮುಂದೆ ಮುನಿರತ್ನ ಅವರನ್ನು ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ವೈರಲ್ ಆಗುತ್ತಿರುವ ಆಡಿಯೋವನ್ನು ಧ್ವನಿ ಪರೀಕ್ಷೆಗೆ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅದು ಮುನಿರತ್ನ ಅವರ ಧ್ವನಿ ಹೌದಾ? ಅಲ್ಲವಾ? ಎಂದು ಪರಿಶೀಲನೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ದ್ವೇಷದ ರಾಜಕಾರಣ ಮಾಡ್ತಿದ್ದಾರೆ ಅನ್ನೋ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರು ಕಂಪ್ಲೇಂಟ್ ಕೊಟ್ಟಿದ್ದಾರೆ, ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ತಗೊಂಡಿದ್ದಾರೆ. ಇದರಲ್ಲಿ ದ್ವೇಷ ಎಲ್ಲಿ ಬರುತ್ತೆ. ಅವರ ಜೊತೆಗೆ ಇದ್ದವರೇ ದೂರು ನೀಡಿದ್ದಾರೆ. ಕಾಂಗ್ರೆಸ್ ನವರು ಏನಾದರು ಕಂಪ್ಲೇಂಟ್ ಕೊಟ್ಟಿದ್ದೀರಾ ಅಥವಾ ಇನ್ಯಾರಾದ್ರೂ ಕೊಟ್ಟಿದ್ದಾರಾ..?, ಅವರ ಜೊತೆಗಿದ್ದವರೇ, ಬೈಗುಳ ತಿಂದವರು ಕಂಪ್ಲೆಂಟ್ ಕೊಟ್ಟಿದ್ದಾರೆ.ಕ್ರಮ ತಗೊಂಡಿಲ್ಲ ಅಂದ್ರೆ ಅದಕ್ಕೂ ಹೇಳ್ತಾರೆ. ನೋಡಿ ಕಂಪ್ಲೆಂಟ್ ಕೊಟ್ಟರೂ ಕ್ರಮ ತಗೊಂಡಿಲ್ಲ ಅಂತಾ ಅದಕ್ಕೂ ಟೀಕೆ ಮಾಡ್ತಾರೆ. ಹಾಗಾಗಿ ಕಾನೂನು ರೀತಿ ಏನು ಕ್ರಮ ತಗೋಬೇಕೋ ಅದನ್ನ ಪೊಲೀಸರು ಮಾಡಿದ್ದಾರೆ ಎಂದು ಹೇಳಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X