ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್ ವಜಾ: ನೇಮಕಗೊಂಡ ಒಂದು ತಿಂಗಳಲ್ಲೇ ಕ್ರಮ

Date:

Advertisements

ಕನ್ನಡಿಗ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ನೇಮಕವಾದ ಒಂದು ತಿಂಗಳಿನಲ್ಲೇ ಕೋಚ್ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿದ ಅನುಭವ ಹೊಂದಿದ್ದ ಅವರು, ಆಗಸ್ಟ್ 14ರಂದು ಕೀನ್ಯಾ ತಂಡದ ಮುಖ್ಯ ಕೋಚ್ ಆಗಿದ್ದರು. ಲಾಮೆಕ್ ಒನ್ಯಾಂಗೊ ಅವರು ಹಂಗಾಮಿ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ ನಂತರ ದೊಡ್ಡ ಗಣೇಶ್ ಅವರನ್ನು ನೇಮಿಸಲಾಗಿತ್ತು. ತರಬೇತುದಾರರಾದ ಜೋಸೆಫ್ ಅಂಗಾರ ಮತ್ತು ಜೋಸೆಫ್ ಅಸಿಚಿ ಅವರೊಂದಿಗೆ ಗಣೇಶ್ ಅವರ ಕೋಚಿಂಗ್ ಸಿಬ್ಬಂದಿಯಾಗಿದ್ದರು. ಮುಖ್ಯ ಕೋಚ್ ಆಗಿ ನೇಮಕವಾದ 30 ದಿನಗಳಲ್ಲೇ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.

ನೇಷನ್ ಆಫ್ರಿಕಾ ವರದಿ ಮಾಡಿರುವ ಪ್ರಕಾರ, ಗಣೇಶ್‌ ಅವರಿಗೆ ಪತ್ರವನ್ನು ಕಳುಹಿಸಲಾಗಿದೆ. ಹೊಸ ಕಾರ್ಯವಿಧಾನಗಳನ್ನು ಅನುಸರಿಸಲು ಬಯಸಿದ ಕಾರಣ ಅವರನ್ನು ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಅವರ ನೇಮಕಾತಿಯನ್ನು ಅನುಮೋದಿಸಲು ಕಾರ್ಯಕಾರಿ ಮಂಡಳಿಯು ನಿರಾಕರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ

ಕ್ರಿಕೆಟ್ ಕೀನ್ಯಾದ ಕಾರ್ಯನಿರ್ವಾಹಕ ಮಂಡಳಿಯ ನಿರ್ಣಯದ ಪ್ರಕಾರ ಬುಧವಾರ, 28 ಆಗಸ್ಟ್ 2024 ರಂದು ಅಂಗೀಕರಿಸಲಾಗಿದೆ ಮತ್ತು ಕ್ರಿಕೆಟ್ ಕೀನ್ಯಾ ಸಂವಿಧಾನದ 5.9 ಮತ್ತು 8.4.3 ರ ಅಂತರ್-ವಿಭಾಗದ ಅಡಿಯಲ್ಲಿ ತಡೆ ಹಿಡಿಯಲಾಗಿದೆ. ಕಾರ್ಯನಿರ್ವಾಹಕ ಮಂಡಳಿಯು ನಿಮ್ಮ ಅನುಮೋದನೆಯನ್ನು ನಿರಾಕರಿಸಿದೆ ಎಂದು ನಾವು ನಿಮಗೆ ಈ ಮೂಲಕ ತಿಳಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದೆ.

ಆಗಸ್ಟ್ 7, 2024 ರಂದು ಮನೋಜ್ ಪಟೇಲ್ ಮತ್ತು ನಿಮ್ಮ ನಡುವೆ ಮಾಡಲಾದ ಒಪ್ಪಂದವನ್ನು ರದ್ದುಗೊಳಿಸಲಾಗಿದೆ. ಮೇಲಿನ ಪ್ರಕಾರ, ಕ್ರಿಕೆಟ್ ಕೀನ್ಯಾ ಹೇಳಲಾದ ಒಪ್ಪಂದಕ್ಕೆ ಬದ್ಧವಾಗಿಲ್ಲ ಎಂದು ಪತ್ರದಲ್ಲಿ ಹೇಳಿದೆ. ತಕ್ಷಣವೇ ಜಾರಿಗೆ ಬರುವಂತೆ ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡದೊಂದಿಗೆ ಯಾವುದೇ ಮುಂದಿನ ಒಟನಾಟ ಮತ್ತು ವ್ಯವಹಾರವನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X