ಗುಬ್ಬಿ | ಡಿವೈಡರ್ ಗೆ ಕಾರು ಡಿಕ್ಕಿ : 8 ವರ್ಷದ ಮಗು ಸಾವು

Date:

Advertisements

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು 8 ವರ್ಷದ ಹೆಣ್ಣು ಮಗು ಶಾಲಿನಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮತ್ತೊಂದು ಮಗು ಚಿಂತಾಜನಕ ಸ್ಥಿತಿಗೆ ತಲುಪಿರುವ ಹೃದಯ ವಿದ್ರಾವಕ ಘಟನೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪದ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ನಡೆದಿದೆ.

ಹೋಂಡೈ ವೆನ್ಯೂ ಹೆಸರಿನ ಕೆ ಎ 06 ಎಂ ಬಿ ಕಾರಿನಲ್ಲಿ ಚಾಲಕ ಮಲ್ಲಿಕಾರ್ಜುನಯ್ಯ ಮಕ್ಕಳಾದ ಶಾಲಿನಿ, ಬಸವೇಶ್, ಗಗನ್, ಕರಣ್, ಸೇರಿದಂತೆ ಶ್ರೇಯಸ್ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು ಇನ್ನು 3 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಜೊತೆಗೆ ಹಿಂಬದಿಯ ಕಾರಿನಲ್ಲಿ ಮಕ್ಕಳ ಪೋಷಕರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.

WhatsApp Image 2024 09 15 at 8.43.09 PM 1

5 ಮಕ್ಕಳ ಪೈಕಿ ಎಲ್ಲರೂ 8 ಮತ್ತು 5 ವರ್ಷದ ಮಕ್ಕಳಾಗಿದ್ದು 4 ಮಂದಿ ಗಂಡು ಮಕ್ಕಳು ಒಬ್ಬಳು ಮಾತ್ರ ಹೆಣ್ಣು ಮಗು ಆಗಿದ್ದು ಇವರೆಲ್ಲ ಗುಬ್ಬಿ ತಾಲ್ಲೋಕಿನ ಕೆ ಮತ್ತಿಘಟ್ಟ ಮತ್ತು ಕಲ್ಲೂರು ಕ್ರಾಸ್ ಗ್ರಾಮದವರಾಗಿದ್ದು ಮಕ್ಕಳನ್ನೆಲ್ಲ ಒಂದು ಕಾರಿನಲ್ಲಿ ಕೂರಿಸಿ ದೊಡ್ಡವರೆಲ್ಲ ಮತ್ತೊಂದು ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ಮನೆ ದೇವರಾದ ಕಾರೆಗುರ್ಚಿ ಬಳಿಯ ಗಂಗಾ ಕ್ಷೇತ್ರಕ್ಕೆ ಕುಟುಂಬದೊಂದಿಗೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಊರಿಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.

Advertisements

ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಕೆವಿ ಭೇಟಿ ನೀಡಿದ್ದು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X