ಉಡುಪಿ | ಜಿ ರಾಜಶೇಖರ್ ಸ್ಮಾರಕ ಜ್ಞಾನ ವೇತನ: ಆಸಕ್ತರಿಂದ ಅರ್ಜಿ ಆಹ್ವಾನ

Date:

Advertisements

ಲೇಖಕ, ಸಾರ್ವಜನಿಕ ಚಿಂತಕ ಹಾಗೂ ಸಾಮಾಜಿಕ ಚಳುವಳಿಗಾರ ಜಿ ರಾಜಶೇಖರ್ ಅಗಲಿ ಎರಡು ವರ್ಷಗಳಾಗಿವೆ. ಜಿ.ರಾಜಶೇಖರ್ ಅವರ ಸೆ.16ರ ಹುಟ್ಟುಹಬ್ಬದ ಪ್ರಯುಕ್ತ ಮೊದಲ ‘ಜಿ.ರಾಜಶೇಖರ್ ಸ್ಮಾರಕ ಜ್ಞಾನವೇತನ’ವನ್ನು ಆರಂಭಿಸಲು ಉದ್ದೇಶಿಸಲಾಗಿದೆ.

ಪ್ರಸ್ತುತ ಜ್ಞಾನವೇತನವು, ಕಾಲದ ಗುಣಗ್ರಾಹಿಯಾದ ಜಿ.ರಾಜಶೇಖರ್ ಅವರ ’ಕಾಗೋಡು ಸತ್ಯಾಗ್ರಹ’ದಂತಹ ಕೃತಿಗಳನ್ನು ಕಟ್ಟಲು ಕನ್ನಡದ ಯುವ ಬರಹಗಾರರು, ಸಂಶೋಧಕರು ಹಾಗೂ ಪತ್ರಕರ್ತರಿಗೆ ಪತ್ರಕರ್ತರಿಗೆ ಸ್ಪೂರ್ತಿದಾಯಕವಾಗಲಿ ಎಂಬುದು ಇದರ ಉದ್ದೇಶವಾಗಿದೆ ಎಂದು ಸಲಹಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಜ್ಞಾನ ವೇತನದ ವಿವರ ಹೀಗಿದೆ:

Advertisements

ಒಟ್ಟು 1,00,000 ರೂಪಾಯಿ ಮೊತ್ತದ ಜ್ಞಾನವೇತನವನ್ನು, 18-35 ರ ವಯಸ್ಸಿನ ಮಿತಿಯಲ್ಲಿ ಇರುವ ಒಬ್ಬ ಅಭ್ಯರ್ಥಿಗೆ ನಾಲ್ಕು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ವಿತರಿಸಲಾಗುವುದು.

ವೇತನ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಂಶೋಧನೆಯ ವಿಷಯ ಹಾಗೂ ಸಂಶೋಧನಾ ವಿಧಾನವನ್ನು ಒಳಗೊಂಡ ಸಂಶೋಧನಾ ಪ್ರಸ್ತಾವನೆಯನ್ನು ಅಕ್ಟೋಬರ್ 30ರೊಳಗೆ ಸಲ್ಲಿಸಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ನುರಿತರಾಗಿರುವವರು, ಅನುಭವಿ ಲೇಖಕರನ್ನು ಒಳಗೊಂಡ ಸಲಹಾ ಮಂಡಳಿಯು ಒಬ್ಬ ಅಭ್ಯರ್ಥಿಯನ್ನು ವೇತನಕ್ಕೆ ಆಯ್ಕೆ ಮಾಡುತ್ತದೆ.

ಆಯ್ಕೆಯಾದ ಅಭ್ಯರ್ಥಿಯು ಸಂಶೋಧನೆಗೆ ಆಯ್ದುಕೊಂಡ ಚಾರಿತ್ರಿಕ ವಿಷಯದ ಮೇಲೆ, ಸಾಕ್ಷಿ-ಪುರಾವೆ ಹಾಗು ಆಳ-ಅಗಲ ಉಳ್ಳ ವರದಿಗಳ ಆಧಾರದಲ್ಲಿ ಸಂಶೋಧನೆ ನಡೆಸಬೇಕು. ಸಲಹಾ ಮಂಡಳಿಯು ಸಂಶೋಧನಾ ಸಂಶೋಧನಾ ಕಾರ್ಯದಲ್ಲಿ ಮಾರ್ಗದರ್ಶನ ನೀಡುತ್ತದೆ. ಮಹಿಳೆ, ಕಡೆಗಣಿತ ಜಾತಿ ಪಂಗಡ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು.

ಕಡೆಗಣಿತ ಸಮುದಾಯಗಳ(ಸ್ಥಳ, ಸಮುದಾಯ ನಿರ್ದಿಷ್ಟತೆ ಇರಬೇಕು) ಪ್ರತಿರೋಧ ಚರಿತ್ರೆ ಮತ್ತೂ ಪ್ರಸ್ತುತ ಪರಿಸ್ಥಿತಿಯ ನೈಜತೆ. ಆಧುನಿಕ ಸಾಂಸ್ಥಿಕ ವ್ಯವಸ್ಥೆಗಳ(ಕಾನೂನು, ನ್ಯಾಯಿಕ, ಆರೋಗ್ಯ, ಶಿಕ್ಷಣ, ಮಹಿಳೆ-ಮಕ್ಕಳ ಕಲ್ಯಾಣ ಇತ್ಯಾದಿ) ವೈಫಲ್ಯದ ಕಾರ್ಯ-ಕಾರಣ -ಪರಿಣಾಮ. ಶ್ರಮಿಕರ ಆಂತರಿಕ ವಲಸೆ: ಸಾಮಾಜಿಕ ಕಾರ್ಯ-ಕಾರಣ, ವಲಸೆಯ ನಕ್ಷೆ, ಪ್ರದೇಶ ಭಿನ್ನತೆ, ಹೊರಗಿಡುವಿಕೆ, ಕಡೆಗಣಿಸುವಿಕೆ, ಸಾಮಾಜಿಕ ಪರಿಣಾಮಗಳು. ‘ಕಡೆಗಣಿತ ಸಮುದಾಯಗಳ ಕಲ್ಯಾಣಕ್ಕಾಗಿ ವಿಜ್ಞಾನ ತಂತ್ರಜ್ಞಾನ- ವರ್ತಮಾನದ ಸ್ಥಿತಿಗತಿ, ಎದುರಿಸಬೇಕಾದ ಸವಾಲುಗಳು, ಸಾಗಬೇಕಾದ ಹಾದಿ. ಜೀವಸಂಕುಲ, ಪರಿಸರ ಮತ್ತು ಮಾನವ ಅಸ್ತಿತ್ವದ ಸಮಸ್ಯೆಗಳು. ಈ ಸೂಚಿತ ವಿಷಯಗಳಲ್ಲದೆ ಸಂಶೋಧನೆಗೆ ಅರ್ಹವಾದ ಸಾಮಾಜಿಕ ಕಾಳಜಿಯ/ಕುತೂಹಲಕರ ವಸ್ತುಗಳಿಗೂ ಅವಕಾಶವಿದೆ. ಆದರೆ, ಸಲಹಾ ಸಮಿತಿಯ ಆಯ್ಕೆಯೇ ಅಂತಿಮವಾಗಿರುತ್ತದೆ.

ಆಯ್ಕೆಯಾದ ಸಂಶೋಧನಾ ವರದಿಯನ್ನು ಅಂತಿಮವಾಗಿ ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಪ್ರಸ್ತಾವನೆಯನ್ನು ಇಮೇಲ್ ಐಡಿ-grskksv@gmail.comಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಬರಹಗಾರರಾದ ಎಚ್.ಎಸ್.ಅನುಪಮಾ, ರಹಮತ್ ತರೀಕೆರೆ, ಕವಿ ರಘುನಂದನ, ಮಾಧ್ಯಮ ತಜ್ಞ ಎನ್‌ಎಎಂ ಇಸ್ಮಾಯಿಲ್, ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಹಸಂಪಾದಕ ಕುಂಟಾಡಿ ನಿತೇಶ್, ಹಿರಿಯ ಚಿಂತಕ ಪ್ರೊ.ಕೆ.ಫಣಿರಾಜ್ ಸಲಹಾ ಮಂಡಳಿಯ ಪ್ರಮುಖರಾಗಿದ್ದಾರೆ.

ಪ್ರಸ್ತಾವನೆ ಕಳುಹಿಸಲು ಇ-ಮೇಲ್ ವಿಳಾಸ: grskksv@gmail.com. ಮಾಹಿತಿಗೆ ಸಂಪರ್ಕ ಸಂಖ್ಯೆ : 7838263911

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X