ಉಡುಪಿ | ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ

Date:

Advertisements

ಜಮಾಅತೆ ಇಸ್ಲಾಮೀ ಹಿಂದ್‌ ಸಂಘಟನೆ ಹಮ್ಮಿಕೊಂಡಿರುವ ‘ಪ್ರವಾದಿ ಮಹಮ್ಮುದ್(ಸ) ಮಹಾನ್ ಚಾರಿತ್ರ್ಯವಂತ -ಸೀರತ್ ಅಭಿಯಾನ’ದ ಪ್ರಯುಕ್ತ ಇಂದು ಉಡುಪಿಯ ಜಾಮಿಯ ಮಸೀದಿ ಆವರಣದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜು ಹಾಗೂ ಜೀವ ಸಂಜೀವಿನಿ ಉಡುಪಿ ಇವರ ಸಹಯೋಗದೊಂದಿಗೆ
ಎಸ್ ಐ ಓ ಉಡುಪಿ ಜಿಲ್ಲೆ, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್, ಗರ್ಲ್ಸ್ ಇಸಾಮಿಕ್ ಆರ್ಗನೈಸೇಶನ್ ಹಾಗೂ ಹುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿಯ ಸಂಯೋಜನೆಯೊಂದಿಗೆ ಈ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

IMG 20240916 WA0059

ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕಸ್ತೂರಿ ಬಾ ಮೆಡಿಕಲ್ ಕಾಲೇಜಿನ ಡಾ ಮಹಮ್ಮದ್ ಅಝೀಝ್ ಮಾತನಾಡಿ, “ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ. ಪ್ರತಿನಿತ್ಯ ಸಾವಿರಾರು ಜನರು ಸರಿಯಾದ ಸಮಯಕ್ಕೆ ರಕ್ತ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಕ್ತದ ಅವಶ್ಯಕತೆ ಬಹಳಷ್ಟು ಇದೆ. ಇದನ್ನು ಮನಗಂಡು ಸಂಘಟಕರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಉತ್ತಮ ಕಾರ್ಯವಾಗಿದೆ” ಎಂದು ಶ್ಲಾಘಿಸಿದರು.

Advertisements

ಶಿಬಿರದಲ್ಲಿ ಎಸ್ ಐ ಓ ರಾಜ್ಯ ಕಾರ್ಯದರ್ಶಿ ನಾಸೀರ್ ಹೂಡೆ, ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಸಾಲಿಡಾರಿಟಿ ಯೂಥ್ ಮೂವ್ ಮೆಂಟ್ ಉಡುಪಿ ಜಿಲ್ಲಾಧ್ಯಕ್ಷ ನಬೀಲ್ ಗುಜ್ಜರಬೆಟ್ಟು, ಹುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ ಉಡುಪಿ ಜಿಲ್ಲಾ ಸಂಚಾಲಕ ಬಿಲಾಲ್ ಮಲ್ಪೆ, ಅನ್ವರ್ ಅಲಿ ಕಾಪು, ಜಿಐಓ ಜಿಲ್ಲಾಧ್ಯಕ್ಷೆ ನುಝ್ಲಾ ಫಾತಿಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X