ಶಾಸಕ ಮುನಿರತ್ನ ವಿಚಾರದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್

Date:

Advertisements

ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೆ ದ್ವೇಷದ ರಾಜಕಾರಣ ಮಾಡಿದೆ ಎಂದು ಆರ್‌ ಅಶೋಕ್ ದೂರಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಫೋರೆನ್ಸಿಕ್‌ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ” ಎಂದರು.

“ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದರು.

Advertisements

“ಇಷ್ಟು ಮುಸ್ಲಿಮರು ಪೆಟ್ರೋಲ್‌ ಬಾಂಬ್‌ ಎಲ್ಲಿಂದ ತಂದಿದ್ದಾರೆ, ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು” ಎಂದರು.

“ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇವರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ.‌ ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅರವಿಂದ ಕೇಜ್ರಿವಾಲ್‌ ನಾಟಕದ ಕಂಪನಿ ನಡೆಸುತ್ತಿದ್ದಾರೆ. ಇವರು ಅಪರಾಧಿ ಎಂದು ಸಾಬೀತಾಗುವ ಮೊದಲೇ ರಾಜೀನಾಮೆ ಕೊಡುವ ನಾಟಕವಾಡುತ್ತಿದ್ದಾರೆ. ಅಧಿಕಾರದ ದುರಾಸೆಗಾಗಿ ಅವರು ರಾಜಕೀಯಕ್ಕೆ ಬಂದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X