ಮುನಿರತ್ನ ಪ್ರಕರಣ | ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ: ಸಿ ಟಿ ರವಿ ಆರೋಪ

Date:

Advertisements

ರಾಜ್ಯದ ಕಾಂಗ್ರೆಸ್ ಸರಕಾರ ಪೂರ್ವಗ್ರಹಪೀಡಿತವಾಗಿ ವರ್ತಿಸುತ್ತಿದೆ. ಚಲುವರಾಯಸ್ವಾಮಿ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ಕೂಡ ದಾಖಲಾಗುವುದಿಲ್ಲ. ಮುನಿರತ್ನ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ, ಎಫ್‍ಐಆರ್ ದಾಖಲಾಗುತ್ತದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಟೀಕಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಮುಂದೆ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ರಾಜ್ಯ ಸರಕಾರ ತೋರಿಸಬೇಕಿತ್ತು. ಚನ್ನಾರೆಡ್ಡಿ ಮೇಲೆ ಅಟ್ರಾಸಿಟಿ ಕೇಸ್ ದಾಖಲಾದರೆ ಅವರನ್ನು ಬಂಧಿಸುವುದಿಲ್ಲ. ಆದರೆ, ಮುನಿರತ್ನ ಮೇಲೆ ಅಟ್ರಾಸಿಟಿ ಕೇಸ್ ಆದರೆ ಅರೆಸ್ಟ್ ಮಾಡುತ್ತಾರೆ. ಈ ಸರಕಾರ ದ್ವೇಷದ ರಾಜಕಾರಣ ಮಾಡುವುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು” ಎಂದು ಪ್ರಶ್ನಿಸಿದರು.

“ತನಿಖೆ ಮಾಡಿ ತಪ್ಪಾಗಿದ್ದರೆ ಶಿಕ್ಷೆ ಆಗಲಿದೆ. ಆದರೆ, ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಮತ್ತೊಂದು ನ್ಯಾಯ ಮಾಡಲು ಇವರಿಗೆ ಅಧಿಕಾರ ಕೊಟ್ಟಿಲ್ಲ. ಸಿದ್ದರಾಮಯ್ಯನವರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ತನಿಖೆ ಎದುರಿಸಲು ಹಿಂಜರಿಯುತ್ತಿರಲಿಲ್ಲ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

“ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟರೆ ತನಿಖೆ ಎದುರಿಸಲು ಮುಖ್ಯಮಂತ್ರಿಗಳು ಭಯ ಪಡುತ್ತಾರೆ. ರಾಜ್ಯಪಾಲರ ವಿರುದ್ಧ ಚಳವಳಿ ಮಾಡುವ ಮಾತನಾಡಿದ್ದಾರೆ. ಸಿದ್ದರಾಮಯ್ಯನವರು ತಮ್ಮದು ಕಳಂಕರಹಿತ ಆಡಳಿತ ಎಂದು ತೀರ್ಪು ಕೊಟ್ಟುಕೊಳ್ಳುತ್ತಾರೆ. ಅವರೇ ಜಡ್ಜ್, ಅವರೇ ಲಾಯರ್” ಎಂದು ಲೇವಡಿ ಮಾಡಿದರು.

“ಮುಖ್ಯಮಂತ್ರಿಯವರೇ, ನಿಮ್ಮದು ಕಳಂಕರಹಿತ ಆಡಳಿತ ಅಲ್ಲ ಎನ್ನಲು ನಮ್ಮ ಹತ್ತಿರ ಸಾಕಷ್ಟು ಸಾಕ್ಷಿಗಳಿವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X