ಚಿಕ್ಕಬಳ್ಳಾಪುರ | ಸಂಸದರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ಮಾತನಾಡಲಿ : ಭರಣಿ ವೆಂಕಟೇಶ್‌

Date:

Advertisements

ಸಂಸದ ಸುಧಾಕರ್‌ ಅವರು ನೈತಿಕತೆ ಇದ್ದರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆನಂತರ ಮಾತನಾಡಬೇಕು ಎಂದು ಕೋಚಿಮುಲ್‌ ನಿರ್ದೇಶಕ ಭರಣಿ ವೆಂಕಟೇಶ್‌ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಾ ವೈಯಕ್ತಿಕ ಟೀಕೆಗಳಿಗೆ ಇಳಿಯುವ ಬಿಜೆಪಿಯವರು ಶಾಸಕರ ತಂದೆ-ತಾಯಿ ಸಾವಿನ ಕುರಿತು ಸುದ್ದಿಗೋಷ್ಠಿಯಲ್ಲಿ ಟೀಕೆ ಮಾಡಿದ್ದಾರೆ. ಇವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಗುಡುಗಿದರು.

ಎಲ್ಲರೂ ವೈಯಕ್ತಿಕ ನಿಂದನೆಗಳನ್ನು ನಿಲ್ಲಿಸಬೇಕು. ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಮಾಡಿ. ಯಾವುದೇ ಪಕ್ಷದವರೇ ಆಗಲಿ, ವೈಯಕ್ತಿಕ ನಿಂದನೆ ಮಾಡುವುದು ತಪ್ಪು. ವೈಯಕ್ತಿಕ ನಿಂದನೆಗಳಿಂದ ರಾಜಕಾರಣಿಗಳು ತಮ್ಮ ಮೌಲ್ಯ ಕಳೆದುಕೊಳ್ಳುತ್ತಿದ್ದಾರೆ.‌ ಜನರಿಂದ ಅಗೌರವಕ್ಕೆ ಗುರಿಯಾಗುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.

Advertisements

ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಮಾಡುವ ಬಿಜೆಪಿಯವರಿಗೆ ಚಿಕ್ಕಬಳ್ಳಾಪುರ ನಗರದ ಪೋಶೆಟ್ಟಿಹಳ್ಳಿ, ತೋಂಡೇನಹಳ್ಳಿ, ಮುದ್ದೇನಹಳ್ಳಿ, ದಿಬ್ಬೂರು ರಸ್ತೆ ಸೇರಿದಂತೆ ನಗರದ ಹಲವೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳೇ ಶಾಸಕರ ಮಾಡುತ್ತಿರುವ ಅಭಿವೃದ್ಧಿಗೆ ಸಾಕ್ಷಿ ಎಂದರು.

ಅದಷ್ಟೇ ಅಲ್ಲದೆ 25 ಕೋಟಿ ವಿಶೇಷ ಅನುದಾನದ ಕ್ರಿಯಾ ಯೋಜನೆ ಸಹ ತಯಾರಿ ಹಂತದಲ್ಲಿದೆ. ಎತ್ತಿನಹೊಳೆ ಯೋಜನೆಯಡಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣಕ್ಕೆ 6 ಕೋಟಿ ರೂಪಾಯಿಯ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಇದು ನಗರ ಶಾಸಕರು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳು ಎಂದು ಮಾಹಿತಿ ನೀಡಿದರು.

ಮಾನ್ಯ ಸಂಸದರು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂ.ಆರ್.‌ಐ ಸ್ಕ್ಯಾನಿಂಗ್‌ ಸೌಲಭ್ಯವನ್ನು ಸಹ ಮಾಡಿಕೊಡಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ಅವರು ಜಿಲ್ಲಾಸ್ಪತ್ರೆಗೆ ಎಂ.ಆರ್.‌ಐ ಸ್ಕ್ಯಾನಿಂಗ್‌ ಸೌಲಭ್ಯವನ್ನು ಕಲ್ಪಿಸಿದರು ಎಂದು ಕಾಲೆಳೆದರು.

ಇನ್ನು ಆರ್.ಆರ್ ನಗರ ಶಾಸಕ ಮುನಿರತ್ನಂ ನಾಯ್ಡು ಅವರ ವಿಚಾರವಾಗಿ ಮಾತನಾಡಿದ ಭರಣಿ ವೆಂಕಟೇಶ್, ಹೆಣ್ಣುಮಕ್ಕಳನ್ನು ಹೀನಾಯವಾಗಿ ಮಾತಾಡುವ ಬಿಜೆಪಿ ಶಾಸಕರನ್ನು ಆರ್.ಎಸ್.ಎಸ್ ಹೇಗೆ ಸಹಿಸಿಕೊಳ್ಳುತ್ತಿದೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೂರು ಮಂದಿ ಪಾಲಿಕೆ ಸದಸ್ಯೆಯರ ಮೇಲೆ ಹಲ್ಲೆ ಮಾಡಿಸಿ, ದರ್ಪ ತೋರಿದ್ದಾರೆ. ಪ.ಜಾತಿಯವರ ಕುರಿತು ಜಾತಿ ನಿಂದನೆ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿಯವರು ಯಾವ ರೀತಿ ಸಂದೇಶ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಈ ಕೂಡಲೇ ಶಾಸಕ ಮುನಿರತ್ನಂ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಲ್ಲವಾದರೆ ಎಸ್ಸಿ ಮತ್ತು ಒಕ್ಕಲಿಗ ಸಮುದಾಯಗಳು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬ್ಲಾಕ್ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಕೆ.ಎನ್.ಜಯರಾಮ್‌ ಮಾತನಾಡಿ, ಸಂಸದರು ಬೆಂಗಳೂರಿನ ಏಸ್‌ ಮೈಕ್ರೋಮ್ಯಾಟಿಕ್‌ ಸಮೂಹ ಸಂಸ್ಥೆಯು ಕುಪ್ಪಳ್ಳಿ ಗ್ರಾಪಂ ವ್ಯಾಪ್ತಿಯ ಕುಡುವತಿ ಸರಕಾರಿ ಶಾಲೆಗೆ ಕೊಠಡಿ, ಶೌಚಾಲಯ ನಿರ್ಮಿಸಿಕೊಟ್ಟಿದ್ದು, ಸಂಸದರ ನೇತೃತ್ವದಲ್ಲಿ ಉದ್ಘಾಟನೆಯಾಗಬೇಕು ಎಂಬ ಕಾರಣಕ್ಕೆ, ಕೊಠಡಿ ಉದ್ಘಾಟನೆ ಮಾಡದಂತೆ ಅಡ್ಡಿಪಡಿಸುವ ಮೂಲಕ ತಮ್ಮ ವ್ಯಕ್ತಿತ್ವ ಏನೆಂಬುದನ್ನು ಪ್ರದರ್ಶಿಸಿದ್ದಾರೆ. ಆದರೆ, ನಮ್ಮ ಶಾಸಕರು ಆ ರೀತಿ ಮಾಡದೇ ಉದ್ಘಾಟನೆಗೆ ಅನವು ಮಾಡಿಕೊಟ್ಟಿದ್ದಾರೆ. ಇದು ಶಾಸಕರ ದೊಡ್ಡ ಗುಣ. ಬಿಜೆಪಿಯವರು ವೈಯಕ್ತಿಕ ನಿಂದನೆಗಳನ್ನು ಬಿಡಬೇಕು. ಅಭಿವೃದ್ಧಿ ವಿಚಾರವಾಗಿ ಮಾತಾಡೋಣ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಸುದ್ದಿಗೋಷ್ಠಿಯಲ್ಲಿ ಅಡ್ಡಗಲ್ಲು ಶ್ರೀಧರ್, ಜನಾರ್ಧನ್, ಆವಲರೆಡ್ಡಿ, ಲಕ್ಷ್ಮಣ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X