ಕೊಪ್ಪಳ | ವಿವಾದಾತ್ಮಕ ಹೇಳಿಕೆ ಆರೋಪ: ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಎಫ್‌ಐಆರ್

Date:

Advertisements

ವಕ್ಫ್ ಮಸೂದೆ ವಿರೋಧಿಸಿ ಕನಕಗಿರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮುಖಂಡರು ಹಿಂದೂ ಸಮಾಜದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.13ರಂದು ನಡೆಸಿದ ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಮುಖಂಡ ಇಮ್ರಾನ್ ಭಾಷಣದಲ್ಲಿ ಮಾತನಾಡುವಾಗ ಹಿಂದೂಗಳ ವೀರ ಸಾವರ್ಕರ್ ಸಂತತಿ ಬಂದರೂ ಮುಸಲ್ಮಾನರ ವಕ್ಫ್ ಆಸ್ತಿಯನ್ನು ಮುಟ್ಟುಗೋಲು ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ವೀರ ಸಾವರ್ಕರ್ ಸಂತತಿಯನ್ನು ಬುಡದಿಂದ ಕಿತ್ತು ಎಸೆಯುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.

ಸಂಘಟನೆಯ ಕಾರ್ಯದರ್ಶಿ ಇಮ್ರಾನ್, ಕನಕಗಿರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ್ ಸಿಂಗನಾಳ ಮತ್ತು ಉಪಾಧ್ಯಕ್ಷ ದಾವೂದ್ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisements
ಎಸ್‌ಡಿಪಿಐ

ಈ ವಕ್ಫ್ ಹೋರಾಟ ಕಾರಟಗಿಯಲ್ಲಿ ಸಣ್ಣ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರಬಹುದು. ದೇಶದಲ್ಲಿ ಎನ್‌ಆರ್‌ಸಿ ಕಾಯ್ದೆ ಬಂದಾಗ ನಮ್ಮ ಸಮುದಾಯದ ಹೆಣ್ಣು ಮಕ್ಕಳು ಬೀದಿಗಿಳಿದು ಅನಿರ್ದಿಷ್ಟ ಧರಣಿ ಮಾಡಿ ರದ್ದುಗೊಳಿಸಿದರು ಎಂದು ಹೇಳಿಕೆಗಳನ್ನು ನೀಡಿದ್ದರು.

ಇದನ್ನು ಓದಿದ್ದೀರಾ? ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಗನಹಾಲ ಚಲೋ’ ಕಾಲ್ನಡಿಗೆ ಜಾಥಾ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರಟಗಿ ಮಂಡಲದ ಅಧ್ಯಕ್ಷ ಮಂಜುನಾಥ ಮಸ್ಕಿ ‘ಎಸ್‌ಡಿಪಿಐ ಕಾರ್ಯಕರ್ತರ ವಿವಾದಾತ್ಮಕ ಹೇಳಿಕೆ ನೀಡಿ ,ರಾಷ್ಟ್ರೀಯ ಏಕತೆ, ಧಾರ್ಮಿಕತೆ ಮತ್ತು ಸೌಹಾರ್ದತೆ ನಾಶ ಮಾಡುತ್ತದೆ. ಧರ್ಮದ ಹೆಸರಿನಲ್ಲಿ ಕೋಮು ಸೌಹಾರ್ದತೆ ಪ್ರಚೋದಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X