ರಾಹುಲ್ ಗಾಂಧಿ ‘ನಂ. 1 ಭಯೋತ್ಪಾದಕ’ ಹೇಳಿಕೆ; ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ ದೂರು ದಾಖಲು

Date:

Advertisements

ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರನ್ನು ದೇಶದ ‘ನಂಬರ್ 1 ಭಯೋತ್ಪಾದಕ’ ಎಂದು ಕರೆದ ಆರೋಪದ ಮೇಲೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಕಾಂಗ್ರೆಸ್ ಮುಖಂಡ ಅಜಯ್ ಮಕೆನ್ ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿ (ಎಐಎಂಸಿಸಿ) ಮುಖ್ಯಸ್ಥೆ, ಕಾಂಗ್ರೆಸ್ ಖಜಾಂಚಿ ಅಲ್ಕಾ ಲಂಬಾ ಅವರೂ ಕೂಡಾ ಕೇಂದ್ರ ಸಚಿವ ರವನೀತ್ ಮತ್ತು ಇತರ ಮೂವರು ರಾಜಕೀಯ ನಾಯಕರ ವಿರುದ್ಧ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರವನೀತ್ ಸಿಂಗ್ ಹೊರತುಪಡಿಸಿ ಕಾಂಗ್ರೆಸ್ ಮುಖಂಡರ ದೂರಿನಲ್ಲಿ ಬಿಜೆಪಿ ನಾಯಕ ತರ್ವಿಂದರ್ ಸಿಂಗ್ ಮರ್ವಾ, ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಮತ್ತು ಉತ್ತರ ಪ್ರದೇಶದ ಸಚಿವ ರಘುರಾಜ್ ಸಿಂಗ್ ಅವರ ಹೆಸರೂ ಇದೆ. ದೂರಿನ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೂ ಕಳುಹಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ ಬಹುಮಾನ: ಶಿವಸೇನಾ ನಾಯಕ

“ಸೆಪ್ಟೆಂಬರ್ 15ರಂದು ರವನೀತ್ ಬಿಟ್ಟು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ರಾಹುಲ್ ಗಾಂಧಿ ಅವರನ್ನು ‘ದೇಶದ ನಂಬರ್ ಒನ್ ಭಯೋತ್ಪಾದಕ’ ಎಂದು ಕರೆದಿದ್ದಾರೆ. ಹಿಂಸಾಚಾರ ಪ್ರಚೋದಿಸುವ ಮತ್ತು ಶಾಂತಿ ಭಂಗ ಮಾಡುವ ಉದ್ದೇಶದಿಂದ ರವನೀತ್ ಅವರು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿ ವಿರುದ್ಧ ದ್ವೇಷ ಮತ್ತು ಆಕ್ರೋಶವನ್ನು ಕೆರಳಿಸಲು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಟಿವಿ ಚಾನೆಲ್‌ಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ” ಎಂದು ಅಜಯ್ ಮಕೆನ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಸೆಪ್ಟೆಂಬರ್ 11ರಂದು ಕಾರ್ಯಕ್ರಮವೊಂದರಲ್ಲಿ ಬಿಜೆಪಿಯ ಮತ್ತೋರ್ವ ನಾಯಕ ತರ್ವಿಂದರ್ ಸಿಂಗ್ ಮರ್ವಾ ಅವರು ರಾಹುಲ್ ಗಾಂಧಿ ಅವರಿಗೆ ಸಾರ್ವಜನಿಕವಾಗಿ ಹತ್ಯೆ ಬೆದರಿಕೆ ಹಾಕಿದ್ದಾರೆ ಎಂದು ಅಜಯ್ ಮಕೆನ್ ಆರೋಪಿಸಿದ್ದಾರೆ.

ತರ್ವಿಂದರ್ ಸಿಂಗ್ ಮರ್ವಾ ತನ್ನ ಭಾಷಣದಲ್ಲಿ “ನೀವು ಉತ್ತಮವಾಗಿ ವರ್ತನೆ ಮಾಡಿ, ಇಲ್ಲವಾದರೆ ನಿಮ್ಮ ಅಜ್ಜಿಯಂತೆಯೇ (ಇಂದಿರಾ ಗಾಂಧಿ) ನಿಮ್ಮ ಗತಿಯಾಗುತ್ತದೆ” ಎಂದು ಹೇಳಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಅಂಗರಕ್ಷಕರಾದ ಸತ್ವಂತ್ ಸಿಂಗ್ ಮತ್ತು ಬಿಯಾಂತ್ ಸಿಂಗ್ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಇನ್ನು ಸೆಪ್ಟೆಂಬರ್ 16ರಂದು ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಅವರು ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಉತ್ತರ ಪ್ರದೇಶದ ಸಚಿವ ರಘುರಾಜ್ ಸಿಂಗ್ ಕೂಡ ರಾಹುಲ್ ಗಾಂಧಿಯನ್ನು ‘ಭಾರತದ ನಂಬರ್ ಒನ್ ಭಯೋತ್ಪಾದಕ’ ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X