‘ಒಂದು ದೇಶ ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

Date:

Advertisements

ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

“ಕೇಂದ್ರ ಸರ್ಕಾರವು ಈ ಅಧಿಕಾರವಧಿಯಲ್ಲಿಯೇ ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರಲಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ ಒಂದು ದಿನದ ಬಳಿಕ ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. 

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ ಸಲ್ಲಿಸಿತ್ತು. ವರದಿಯನ್ನು ಸಂಪುಟದ ಮುಂದೆ ಪ್ರಸ್ತಾಪಿಸಲಾಗಿದ್ದು, ಸಚಿವ ಸಂಪುಟ ಅಸ್ತು ಎಂದಿದೆ.

Advertisements

ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿದೆ. ಹಾಗೆಯೇ ಇದಾದ 100 ದಿನಗಳಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲೂ ಸಮಿತಿ ಶಿಫಾರಸು ಮಾಡಿದೆ.

ಸಮಿತಿಯು ಮಾಡಿದ ಶಿಫಾರಸುಗಳ ಅನುಷ್ಠಾನವನ್ನು ಪರಿಶೀಲಿಸಲು ‘ಅನುಷ್ಠಾನ ಗುಂಪು’ ಸ್ಥಾಪಿಸಲು ಸಮಿತಿಯು ಪ್ರಸ್ತಾಪಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X