ದಲಿತ ಬಾಲಕನಿಗೆ ಪೊಲೀಸರಿಂದಲೇ ಚಿತ್ರಹಿಂಸೆ; ಬಾಲಕ ಸಾವು

Date:

Advertisements

ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿದ್ದ ದಲಿತ ಬಾಲಕ ಸಾವನ್ನಪ್ಪಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮೃತ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಲಖಿಂಪುರ ಜಿಲ್ಲೆಯ ಖೇರಿ ಪೊಲೀಸರು ಬಾಲಕ ಆಕಾಶ್‌ನನ್ನು ಸೆಪ್ಟೆಂಬರ್ 3ರಂದು ಬಂಧಿಸಿದ್ದರು.

ವಿಚಾರಣೆ ವೇಳೆ ಆತನಿಗೆ ಪೊಲೀಸರು ವಿಕೃತವಾಗಿ ಥಳಿಸಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸರು ಹಲ್ಲೆಯಿಂದ ಬಾಲಕ ತೀವ್ರವಾಗಿ ಗಾಯಗೊಂಡಿದ್ದನು. ಆತನನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಕಾಶ್‌ ಸಾವನ್ನಪ್ಪಿದ್ದಾನೆ.

Advertisements

“ಸಾವಿನ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ” ಎಂದು ಲಖಿಂಪುರ ಎಸ್‌ಪಿ ಗಣೇಶ್ ಪ್ರಸಾದ್ ಹೇಳಿದ್ದಾರೆ. ಬಾಲಕ ಆಕಾಶ್‌ ಸೆಪ್ಟಿಸೆಮಿಯಾದಿಂದ ಬಳಲುತ್ತಿದ್ದರು ಎಂದು ಸರ್ಕಲ್ ಆಫೀಸರ್ ರಮೇಶ್ ಕುಮಾರ್ ತಿವಾರಿ ಹೇಳಿಕೆ ನೀಡಿದ್ದಾರೆ.

ಬಾಲಕನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಮೃತ ಬಾಲಕನ ಸಂಬಂಧಿಕರು ಮತ್ತು ಸಿಸಾವನ್ ಕಾಲಾ ಗ್ರಾಮದ ನಿವಾಸಿಗಳು ಒತ್ತಾಯಿಸಿದ್ದಾರೆ. ಪೊಲೀಸ್ ಠಾಣೆಯ ಹೊರಗೆ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X