ನಾನು ರಾಹುಲ್‌ ಗಾಂಧಿ ಅಭಿಮಾನಿ ಎಂದ ಶಿವರಾಜ್‌ ಕುಮಾರ್‌

Date:

Advertisements

ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿರುವ ಶಿವರಾಜ್‌ ಕುಮಾರ್‌

ಇತ್ತೀಚೆಗೆ ಕೈ ಪಾಳಯ ಸೇರಿರುವ ಶಿವರಾಜ್‌ ಕುಮಾರ್‌ ಪತ್ನಿ ಗೀತಾ

ನಟ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಪಕ್ಷದಲ್ಲಿರುವ ತಮ್ಮ ಆಪ್ತರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಇತ್ತೀಚೆಗೆ ತಿಳಿಸಿದ್ದರು. ಈಗಾಗಲೇ ಸೊರಬ ಮತ್ತು ಸಾಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿರುವ ಅವರು ಮಂಗಳವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

Advertisements

ತೀರ್ಥಹಳ್ಳಿ ಕ್ಷೇತ್ರದ ಬಾಳೇಬೈಲು ಸಮೀಪದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್‌ ಕಾಂಗ್ರೆಸ್‌ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಪ್ರಮುಖ ಅತಿಥಿಯಾಗಿ ಭಾಗವಹಿಸಿದ್ದರು. ಇದೇ ವೇದಿಕೆಯಲ್ಲಿ ಶಿವರಾಜ್‌ ಕುಮಾರ್‌ ಕಾಣಿಸಿಕೊಂಡಿದ್ದು, ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ್‌ ಅವರ ಪರ ಮತ ಯಾಚಿಸಿದ್ದಾರೆ.

ತಮ್ಮ ಪತ್ನಿ ಗೀತಾ ಜೊತೆಗೆ ವೇದಿಕೆಗೆ ಬಂದ ಶಿವರಾಜ್‌ ಕುಮಾರ್‌ ಅವರನ್ನು ಮಧು ಬಂಗಾರಪ್ಪನವರು ರಾಹುಲ್‌ ಗಾಂಧಿ ಅವರಿಗೆ ಪರಿಚಯಿಸಿದ್ದಾರೆ. ಶಿವರಾಜ್‌ ಕುಮಾರ್‌ ನೋಡುತ್ತಲೇ ಅಪ್ಪಿಕೊಂಡ ರಾಹುಲ್‌ ಕುಶಲೋಪರಿ ವಿಚಾರಿಸಿದ್ದಾರೆ.

ಇದಾದ ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಶಿವಣ್ಣ, “ಇವತ್ತು ನಾನು ಕೂಡ ನಿಮ್ಮ ಹಾಗೆ ಒಬ್ಬ ಅಭಿಮಾನಿಯಾಗಿ ರಾಹುಲ್‌ ಗಾಂಧಿ ಅವರನ್ನು ನೋಡಬೇಕು ಎಂಬ ಆಸೆಯಿಂದ ಬಂದಿದ್ದೀನಿ. ಇತ್ತೀಚೆಗೆ ಅವರು ನಡೆಸಿದ ಭಾರತ್‌ ಜೋಡೋ ಯಾತ್ರೆಯನ್ನು ನೋಡಿ ನಾನು ಕೂಡ ಸ್ಫೂರ್ತಿಗೊಂಡೆ. ಆ ಯಾತ್ರೆ ಬಹಳ ಖುಷಿ ನೀಡಿತ್ತು. ನನಗೆ ʼಫಿಟ್‌ನೆಸ್‌ʼ ಎಂದರೆ ತುಂಬಾ ಇಷ್ಟ. ಅವರು ʼಫಿಟ್‌ನೆಸ್‌ʼ ಜೊತೆಗೆ ಒಂದೊಳ್ಳೆಯ ಉದ್ದೇಶವನ್ನಿಟ್ಟುಕೊಂಡು ಇಡೀ ಭಾರತದುದ್ದಕ್ಕೂ ನಡೆದುಕೊಂಡು ಹೋಗಿದ್ದು ಉತ್ತೇಜನಕಾರಿಯಾಗಿತ್ತು” ಎಂದಿದ್ದಾರೆ.

“ನಾನೊಬ್ಬ ನಟ ನನಗೆ ರಾಜಕೀಯ ಗೊತ್ತಿಲ್ಲ. ನಮ್ಮ ಮಾವ ಬಂಗಾರಪ್ಪನವರು ರಾಜಕೀಯದಲ್ಲಿದ್ದರು. ಅವರ ಮಗ ಮಧು ಕೂಡ ರಾಜಕಾರಣದಲ್ಲಿದ್ದಾರೆ. ಗೀತಾ ಅವರು ಈ ಹಿಂದೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್‌ ಸೇರಿದ್ದಾರೆ. ನಾನು ಗೀತಾ ಅವರಿಗೆ ಬೆಂಬಲವಾಗಿರುತ್ತೇನೆ. ಯಾರು ಒಳ್ಳೆಯದನ್ನು ಮಾಡುತ್ತಾರೆ, ಯಾರನ್ನು ಆಯ್ಕೆ ಮಾಡಬೇಕು ಎಂಬುದು ಜನರಿಗೆ ಗೊತ್ತಿದೆ. ಈ ಎಲ್ಲ ಅಭ್ಯರ್ಥಿಗಳು ಜಯಭೇರಿ ಬಾರಿಸುವಂತೆ ಆಶೀರ್ವಾದ ಮಾಡಿ” ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X