ಮಂಡ್ಯ | ಮಹಿಳೆಯರಿಗೆ ಸಮಾನತೆ ನೀಡಿದ ನಾಡುಗಳು ಮುಂಚೂಣಿಯಲ್ಲಿವೆ: ನ್ಯಾ. ಬಿ ಟಿ ವಿಶ್ವನಾಥ್‌

Date:

Advertisements

“ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ” ಎಂಬ ನಾಣ್ಣುಡಿಯಂತೆ ಎಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲಾಗಿದೆಯೋ ಆ ನಾಡುಗಳು ಪ್ರಗತಿಯತ್ತ ದಾಪುಗಾಲು ಹಾಕುತ್ತಿವೆ ಎಂದು ನ್ಯಾ. ಬಿ ಟಿ ವಿಶ್ವನಾಥ್ ಅಭಿಪ್ರಾಯಪಟ್ಟರು.

ಮೈಸೂರಿನ ಬನ್ನೂರು ಹೋಬಳಿಯ ಯಾಚೇನಹಳ್ಳಿಯಲ್ಲಿ ರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟ್‌ ಆಯೋಜಿಸಿದ್ದ ‘ವಿಶ್ವಮಾನವ ಮೌಲ್ಯ ಚಿಂತನ ಸತ್ಸಂಗ-15’ ಕಾರ್ಯಕ್ರಮದಲ್ಲಿ “ಮಹಿಳಾ ಪಾತ್ರ” ಕುರಿತ ವಿಚಾರ ಮಂಡನೆ ಮಾಡಿ ಮಾತನಾಡಿದರು.

“ಮಹಿಳೆಯರಿಗೆ ಪುರುಷರಷ್ಟೇ ರಾಜಕೀಯ, ಹಣಕಾಸು ಹಾಗೂ ಸಾಮಾಜಿಕ ಸಮಾನತೆ ದೊರೆತರೆ ಮಾತ್ರ ವಿಶ್ವಮಾನವ ಧರ್ಮ ಸ್ಥಾಪನೆ ಸಾಧ್ಯ. ಉದಾಹರಣೆಗೆ, ಸ್ವೀಡನ್‌ನಿಂದ ಶೇ.45ರಷ್ಟು ಮಂದಿ ಮಹಿಳೆಯ ಪರವಾಗಿದ್ದು, ಅಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇದರಿಂದ ಆ ನಾಡು ಪ್ರಗತಿಯತ್ತ ಸಾಗಲು ಸಾಧ್ಯವಾಯಿತು” ಎಂದು ವಿವರಿಸಿದರು.

Advertisements

“ಇಡೀ ನೆಲದಲ್ಲಿ ಯಹೂದಿ ಸಮುದಾಯದವರು ಶೇ.20ರಷ್ಟು ನೊಬೆಲ್‌ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ ಅವರ ಜನ ಎಣಿಕೆ ಕೇವಲ ಶೇ.1ರಷ್ಟು ಮಾತ್ರ. ಆದರೂ ನೊಬೆಲ್‌ ಪ್ರಶಸ್ತಿಗಳಲ್ಲಿ ಅತಿಹೆಚ್ಚು ಸಾಧನೆ ಮಾಡಿದ್ದಾರೆ. ಇದಕ್ಕೆ ಕಾರಣ, ಯಹೂದಿ ಸಮುದಾಯದಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಅವಕಾಶಗಳನ್ನು ನೀಡಲಾಗಿರುವುದು” ಎಂದು ಮಾಹಿತಿ ನೀಡಿದರು.

“ಇಡೀ ವಿಶ್ವದಲ್ಲಿ ಡೆನ್ಮಾರ್ಕ್, ಇಟಲಿ, ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್, ಟರ್ಕಿ, ಮೆಕ್ಸಿಕೋ ಹಾಗೂ ಜರ್ಮನಿಯಂತಹ 10 ನಾಡುಗಳಲ್ಲಿ ಮಹಿಳೆಯರಿಗೆ ಹೆಚ್ಚು ಸಮಾನತೆ ನೀಡಲಾಗಿದೆ. ಇದರಿಂದಾಗಿ ಈ ನಾಡುಗಳು ಪ್ರಗತಿ ಸಾಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಶ್ರೀರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟಿನ ಶ್ರೀನಾದಾನಂದನಾಥ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್, ಕೆ ಜಿ ವಿಜಯಕುಮಾರ್, ಡಾ. ಮಾದೇಶ್, ಎಂಜಿನಿಯರ್ ಜಿ ಎನ್ ಕೆಂಪರಾಜು, ಡಾ. ಆದಿತ್ಯಗೌಡ, ‘ನುಡಿ ಕರ್ನಾಟಕ’ದ ಸಂಪಾದಕ ಎನ್. ನಾಗೇಶ್, ಸಂತೋಷ್, ಟಿ ಡಿ ನಾಗರಾಜ್, ವೈರಮುಡಿ, ಪಾವನಿ, ನೆಲದನಿ ಬಳಗದ ಮಂಗಲ ಲಂಕೇಶ್, ಸುಬ್ರಮಣ್ಯ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X