ದೆಹಲಿ ಅಬಕಾರಿ ನೀತಿ ಪ್ರಕರಣ | ಇ.ಡಿ ಆರೋಪ ಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು ಉಲ್ಲೇಖ

Date:

Advertisements
  • ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧಿಸಿ ರಾಘವ್ ಚಡ್ಡಾ ಸೇರಿ ಅನೇಕರ ಹೆಸರು ಉಲ್ಲೇಖ
  • ಅಬಕಾರಿ ನಿತಿ ಹಗರಣ ಪ್ರಕರಣದಲ್ಲಿ ಬಂಧಿತನಾಗಿರುವ ಮನೀಶ್ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯಲ್ಲಿ ಆಮ್‌ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಹೆಸರನ್ನು ಉಲ್ಲೇಖಿಸಿದೆ ಎಂದು ಮಂಗಳವಾರ (ಮೇ 2) ವರದಿಯಾಗಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ. ಇ.ಡಿ ತನ್ನ ದೋಷಾರೋಪ ಪಟ್ಟಿಯಲ್ಲಿ ಚಡ್ಡಾ ಅವರನ್ನು ಆರೋಪಿಯಾಗಿ ಹೆಸರಿಸಿಲ್ಲ. ಆದರೆ ಪಟ್ಟಿಯಲ್ಲಿ ಚಡ್ಡಾ ಅವರ ಹೆಸರು ಸೇರಿಸಿದೆ ಎಂದು ಮಾಧ್ಯಮಗಳ ವರದಿ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ಸಲ್ಲಿಸಿದ ಪೂರಕ ದೋಷಾರೋಪ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆರೋಪಿಯಾಗಿ ಹೆಸರಿಸಲಾಗಿದೆ ಎಂದು ಮಾಧ್ಯಮಗಳು ತಪ್ಪಾಗಿ ಬಿಂಬಿಸುತ್ತಿವೆ ಎಂದು ಚಡ್ಡಾ ಕಿಡಿಕಾರಿದ್ದಾರೆ.

Advertisements

“ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ನನ್ನನ್ನು ಆರೋಪಿಯನ್ನಾಗಿ ಇ.ಡಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ ಎಂಬ ಮಾಧ್ಯಮ ವರದಿಗಳು ಸುಳ್ಳು. ನನ್ನ ಘನತೆಗೆ ಕುಂದು ತರಲು ಹೀಗೆ ಮಾಡಲಾಗುತ್ತಿದೆ. ನಾನು ಇ.ಡಿ ವರದಿಯಲ್ಲಿ ಆರೋಪಿ ಅಥವಾ ಶಂಕಿತನಾಗಿ ಹೆಸರಿಸಲ್ಪಟ್ಟಿಲ್ಲ” ಎಂದು ಚಡ್ಡಾ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

“ಪ್ರಕರಣ ಸಂಬಂಧ ಕೆಲವು ಸಭೆಗಳಲ್ಲಿ ಹಾಜರಿದ್ದರು ಎಂದು ನನ್ನ ಹೆಸರನ್ನು ಉಲ್ಲೇಖಿಸಲಾಗಿದೆ. ಆದರೆ ಈ ಕುರಿತು ಸ್ಪಷ್ಟ ಆಧಾರಗಳಿಲ್ಲ” ಎಂದು ರಾಘವ್‌ ಚಡ್ಡಾ ಹೇಳಿದ್ದಾರೆ.

ಇ.ಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಸೇರಿ ಪಕ್ಷದ ಇತರ ನಾಯಕರನ್ನು ಹೆಸರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೇರಳ | ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ

ಬಂಧಿತ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಘವ್‌ ಚಡ್ಡಾ ಅವರು ಭಾಗವಹಿಸಿದ್ದರು. ರದ್ದುಗೊಂಡಿರುವ ಅಬಕಾರಿ ನೀತಿಯನ್ನು ತರುವ ಯೋಜನೆಯ ಬಗ್ಗೆ ಉದ್ಯಮಿಗಳೊಂದಿಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಇ.ಡಿ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧಿಸಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X