ಜಾತಿ ದೌರ್ಜನ್ಯ | ದಲಿತ ಯುವಕನಿಗೆ ಶೂ ನೆಕ್ಕಿಸಿ, ಸವರ್ಣೀಯರಿಂದ ಹಲ್ಲೆ

Date:

Advertisements

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನಿಗೆ ಶೂ ನೆಕ್ಕುವಂತೆ ಮಾಡಿ ಪ್ರಬಲ ಜಾತಿಗರು ಜಾತಿ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ.  ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 15 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ವೈರಲ್ ವೀಡಿಯೋದಲ್ಲಿ ಜಾತಿ ದೌರ್ಜನ್ಯಕ್ಕೆ ಒಳಗಾಗಿರುವ ಯುವಕನನ್ನು ರಾಯ್‌ಬರೇಲಿ ಬಳಿಯ ಉಂಚಾಹರ್ ಕೊತ್ವಾಲಿ ಪ್ರದೇಶದ ಸವಯ್ಯ ರಾಜೇ ಗ್ರಾಮದ ನಿವಾಸಿ ಅಮನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಕೆಲವರು ಅಮಾನುಷವಾಗಿ ಥಳಿಸಿ ಶೂ ನೆಕ್ಕುವಂತೆ ಮಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ವಿಡಿಯೋ ಸಂಬಂಧ ಸಾಮಾಜಿಕ ಜಾಲತಾನದಲ್ಲಿ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ ಡಾಲ್ಮೌ ಅರುಣ್ ನೌಹರ್, “ಈ ಘಟನೆ ಹಳೆಯದು.  ಉಂಚಹಾರ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಂತ್ರಸ್ತ ಯುವಕ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 12 ಮಂದಿ ಮತ್ತು 3 ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ” ಎಂದು ಹೇಳಿದ್ದಾರೆ.

Advertisements

ಒಂದೆಡೆ, ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ‘ಬುಲ್ಡೋಜರ್ ಆಕ್ಷನ್’ ಹೆಸರಿನಲ್ಲಿ ಹಿಂದುಳಿದ, ದಲಿತ ಸಮುದಾಯಕ್ಕೆ ಸೇರಿದ ಆರೋಪಿಗಳ ಮನೆ, ಅಂಗಡಿ, ಆಸ್ತಿಗಳನ್ನು ಕೆಡವುತ್ತಿದೆ. ಇನ್ನೊಂದೆಡೆ, ದಲಿತರ ಮೇಲೆ ಜಾತಿ ದೌರ್ಜನ್ಯಗಳು ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ದಲಿತರಿಗೆ ರಕ್ಷಣೆ ಮರೀಚಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರಕಾರ, ಆಗಸ್ಟ್ 21 ರಂದು ಘಟನೆ ನಡೆದಿದೆ. ಸಂತ್ರಸ್ತ ಅಮನ್ ಸಿಂಗ್ ಅವರು ಕೆಲಸದ ನಿಮಿತ್ತ ಉಂಚಹಾರ್‌ಗೆ ಬೈಕ್‌ನಲ್ಲಿ ತೆರಳಿದ್ದರು. ಅಲ್ಲಿ, ಅವರ ಬೈಕ್‌ಗೆ ಕಾರಿನಲ್ಲಿ ಬಂದ ನಾಲ್ಕೈದು ಮಂದಿ ಡಿಕ್ಕಿ ಹೊಡೆದು, ಅಪಹರಿಸಿ ಹಲ್ಲೆಗೈದು, ಮತ್ತೆ ಸುಂಕದಕಟ್ಟೆ ಬಳಿ ಎಸೆದು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X