ವಿಜಯಪುರ | ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹ; ಸೆ.22ರಂದು ವಕೀಲರ ಸಮಾವೇಶ

Date:

Advertisements

ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವ ಸಂಬಂಧ ಚರ್ಚಿಸಲು ಬೆಳಗಾವಿ ಗಾಂಧಿ ಭವನದಲ್ಲಿ ಸೆಪ್ಟೆಂಬರ್ 22ರ ಬೆಳಿಗ್ಗೆ 10ಕ್ಕೆ ವಕೀಲರ ಸಮಾವೇಶ ಸಂಘಟಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ವಕೀಲರು ಪಾಲ್ಗೊಂಡು ಮೀಸಲಾತಿ ಪಡೆಯಲು ಮುಂದೆ ಯಾವ ರೀತಿ ಹೋರಾಟ ನಡೆಸಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

“ಪಂಚಮಸಾಲಿ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ, ಪ್ರತಿಭಾನ್ವಿತರ ಅವಕಾಶಕ್ಕಾಗಿ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಕಳೆದ ಹಲವು ವರ್ಷಗಳಿಂದ ಈ ಬಗ್ಗೆ ಸುದೀರ್ಘ ಹೋರಾಟ ನಡೆಸಲಾಗುತ್ತಿದೆ” ಎಂದರು.

Advertisements

“ಪಂಚಮಸಾಲಿ ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಾನ್ವಿತರ ಅವಕಾಶಕ್ಕಾಗಿ ಪ್ರವರ್ಗ 2ಎ ಪಾದಯಾತ್ರೆ, ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆಯ ಗಮನ ಸೆಳೆಯುವುದು ಸೇರಿದಂತೆ ವಿವಿಧ ಹೋರಾಟಗಳನ್ನು ಕೈಗೊಳ್ಳಲಾಗಿತ್ತು. ಸಮುದಾಯದ ಶಾಸಕರು ಈ ಬಗ್ಗೆ ಧ್ವನಿ ಎತ್ತಲು ಸಭಾಧ್ಯಕ್ಷರಿಗೆ ಅವಕಾಶ ಕೋರಿದರೂ ಅವಕಾಶ ದೊರಕಲಿಲ್ಲ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊರತುಪಡಿಸಿ ಉಳಿದ ಶಾಸಕರು ಈ ಬಗ್ಗೆ ಪ್ರಬಲವಾಗಿ ಧ್ವನಿ ಎತ್ತಲಿಲ್ಲ. ನಮ್ಮ ಸಮುದಾಯದ ಶಾಸಕರು ಇನ್ನೂ ಪ್ರಬಲ ಹಾಗೂ ಪರಿಣಾಮಕಾರಿಯಾದ ಧ್ವನಿ ಮೊಳಗಿಸಬಹುದಿತ್ತು.‌ ಕಾನೂನಾತ್ಮಕ ಹೋರಾಟದ ಮೂಲಕ ಹಕ್ಕನ್ನು ಪಡೆದುಕೊಳ್ಳಲು ತೀರ್ಮಾ ಕೈಗೊಳ್ಳಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಹೋರಾಟಗಾರರ ಶ್ರಮವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ ಎಂ ಪಾಟಿಲ, ಈರಣ್ಣ ಚಾಗಶೆಟ್ಟಿ, ವಕೀಲರಾದ ಶ್ರೀಶೈಲ್ ಮುಳಜಿ, ಬಿ ಎಂ ಪೊಲೀಸ್ ಪಾಟೀಲ್, ಜಿಲ್ಲಾ ಪಂಚಮಸಾಲಿ ಸಮಾಜದ ಕಾರ್ಯದರ್ಶಿ ನಿಂಗನಗೌಡ ಸೊಲ್ಲಾಪುರ, ನಗರ ಘಟಕದ ಅಧ್ಯಕ್ಷ ಶ್ರೀಶೈಲ್ ಬುಕ್ಕಣ್ಣಿ, ಜಿಲ್ಲಾ ಮಾಧ್ಯಮ ವಕ್ತಾರ ದಾನೇಶ್ ಅವಟಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X