ಲೈಂಗಿಕ ದೌರ್ಜನ್ಯ ಪ್ರಕರಣ | ತೆಲುಗು ಸಿನಿಮಾ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಬಂಧನ

Date:

Advertisements

‘ಬಾಹುಬಲಿ’ ಮತ್ತು ‘ಪುಷ್ಪ’ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್‌ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು ತಮ್ಮ ಮೇಲೆ ಜಾನಿ ಮಾಸ್ಟರ್‌ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತಾವು ಅಪ್ರಾಪ್ತೆಯಾಗಿದ್ದಾಗಲೇ ತಮ್ಮ ಮೇಲೆ ಜಾನಿ ಮಾಸ್ಟರ್ ಮೊದಲ ಬಾರಿಗೆ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದರು. ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿ ಜಾನಿ ಮಾಸ್ಟರ್‌ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಅವರನ್ನು ಹೈದರಾಬಾದ್‌ಗೆ ಸ್ಥಳಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisements

“ನಾನು ಜಾನಿ ಮಾಸ್ಟರ್‌ಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದೆ. ಆಗ, ವಿವಿಧ ನಗರಗಳಲ್ಲಿ ತಮ್ಮ ಚಿತ್ರೀಕರಣಕ್ಕೆ ತೆರಳಿದ್ದಾಗ ಅನೇಕ ಬಾರಿ ತನ್ನ ಮೇಲೆ ಜಾನಿ ಮಾಸ್ಟರ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಮಾತ್ರವಲ್ಲದೆ, ಬೇರೆಲ್ಲಿಯೂ ಉದ್ಯೋಗಾವಕಾಶ ಸಿಗದಂತೆ ಮಾಡುತ್ತೇನೆಂದು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ” ಎಂದೂ ಯುವತಿ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

2017ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಗೆ ಜಾನಿ ಮಾಸ್ಟರ್ ಪರಿಚಯವಾಗಿತ್ತು. ಅದಾದ, ಎರಡು ವರ್ಷಗಳ ನಂತರ ಅವರು ನನ್ನನ್ನು ಸಹಾಯಕ ಕೊರಿಯೋಗ್ರಾಫರ್‌ಆಗಿ ನೇಮಿಸಿಕೊಂಡಿದ್ದರು. ಬಳಿಕ, ನನ್ನ ಮೇಲೆ ಜಾನಿ ಮಾಸ್ಟರ್‌ ಲೈಂಗಿಕ ದೌರ್ಜನ್ಯ ಎಸಗಿದ್ದರು. ಘಟನೆ ಬಗ್ಗೆ, ದೂರು ನೀಡಿದರೆ ಬೇರೆಯದ್ದೇ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದದರು. ಫೋಟೋಶೂಟ್ ಮತ್ತು ರಿಹರ್ಸಲ್ ಸಮಯದಲ್ಲಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ” ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ.

ಸಂತ್ರಸ್ತ ಯುವತಿ ತಲುವು ಚಲನಚಿತ್ರ ವಾಣಿಜ್ಯ ಮಂಡಳಿಗೂ ದೂರು ನೀಡಿದ್ದರು. ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಬೆನ್ನಲ್ಲೇ ಜಾನಿ ಮಾಸ್ಟರ್‌ರನ್ನು ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕಾರ್ಮಿಕರ ಸಂಘದಿಂದ ಅಮಾನತುಗೊಳಿಸಲಾಗಿತ್ತು.

ಜಾನಿ ಮಾಸ್ಟರ್ ಅವರು ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಪಕ್ಷದ ಸದಸ್ಯರಾಗಿದ್ದಾರೆ. ಜನಸೇನೆ, ಪ್ರಸ್ತುತ ಆಂಧ್ರಪ್ರದೇಶದಲ್ಲಿ ಸರ್ಕಾರ ರಚಿಸಿರುವ ಮೈತ್ರಿಕೂಟದ ಭಾಗವಾಗಿದೆ. ಪಕ್ಷದ ಕಾರ್ಯಕ್ರಮಗಳಿಂದ ದೂರ ಇರುವಂತೆ ಜಾನಿ ಮಾಸ್ಟರ್‌ಗೆ ತಿಳಿಸಲಾಗಿದೆ ಎಂದು ಜನಸೇನೆ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X