ಮೋದಿ ಉಪನಾಮ ಪ್ರಕರಣ | ರಾಹುಲ್‌ಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಣೆ

Date:

Advertisements

ಮೋದಿ ಉಪನಾಮ ಪ್ರಕರಣದಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ ನ್ಯಾಯಾಲಯವು ತನ್ನ ತೀರ್ಪನ್ನು ಬೇಸಿಗೆ ರಜೆಯ ನಂತರ ಪ್ರಕಟಿಸಲು ಕಾಯ್ದಿರಿಸಿದೆ.

ರಾಹುಲ್ ಗಾಂಧಿ ಅವರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ಕೋರಿದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರ ನ್ಯಾಯಪೀಠವು, ಯಾವುದೇ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತು. ರಾಹುಲ್‌ ಅವರಿಗೆ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆ ಎಂಬ ನಿರ್ಧಾರವನ್ನು ಗುಜರಾತ್ ಹೈಕೋರ್ಟ್ ಬೇಸಿಗೆ ರಜೆ ನಂತರ ನೀಡುವುದಾಗಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಮಾನ ಹಾನಿ ಪ್ರಕರಣ | ಶಿಕ್ಷೆಗೆ ತಡೆ ಕೋರಿದ್ದ ರಾಹುಲ್‌ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್‌ ನ್ಯಾಯಾಲಯ

Advertisements

ದೂರುದಾರ ಪೂರ್ಣೇಶ್ ಮೋದಿ ಪರ ಹಿರಿಯ ವಕೀಲ ನಿರುಪಮ್ ನನ್ವತಿ ಹಾಗೂ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರ ಪೀಠದ ಮುಂದೆ ವಾದಿಸಿದ ನಂತರ ಆಪಾದಿತನ ಅಪರಾಧವು ನೈತಿಕ ದೌರ್ಬಲ್ಯದ ಅಂಶವನ್ನು ಒಳಗೊಂಡಿಲ್ಲ ಎಂದು ತೀರ್ಪನ್ನು ಕಾಯ್ದಿರಿಸಲಾಯಿತು.

ರಾಹುಲ್‌ ಪರ ವಕೀಲರಾದ ಅಭಿಷೇಕ್ ಸಿಂಘ್ವಿ, ಪ್ರಕರಣವು ಗುರುತಿಸಬಹುದಾದ, ಜಾಮೀನು ನೀಡಬಹುದಾದ ಮತ್ತು ಗಂಭೀರವಲ್ಲದ ಅಪರಾಧ. ಆದ್ದರಿಂದ ಶಿಕ್ಷೆಯನ್ನು ಅಮಾನತುಗೊಳಿಸಬೇಕು. ಹೆಚ್ಚು ಗಂಭೀರವಾದ ಅಪರಾಧಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಶಿಕ್ಷೆಗೆ ತಡೆ ನೀಡಿವೆ ಎಂದು ವಾದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X