ಕೋಲಾರ | ನಕಲಿ ದಾಖಲೆ ಸೃಷ್ಟಿಸಿ ದಲಿತರ ಭೂಕಬಳಿಕೆಗೆ ಯತ್ನ; ಸ್ಥಳೀಯರ ಆಕ್ರೋಶ

Date:

Advertisements

ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೊಕ್ಕಪುರ ಗ್ರಾಮಕ್ಕೆ ಸೇರಿದ ಸುಮಾರು 2.24 ಎಕರೆ ಭೂಮಿಯಲ್ಲಿ ನಾಲ್ಕೈದು ದಶಕಗಳಿಂದ ನೂರಾರು ಅನಕ್ಷರಸ್ಥ ದಲಿತ ಕುಟುಂಬಗಳು ಅನುಭವದಲ್ಲಿವೆ. ಕೆಲ ಕುಟುಂಬಗಳು ಈಗಾಗಲೇ ಮನೆ ಹಾಗೂ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದು, ಇನ್ನೂ ಕೆಲವರು ಅವರವರ ಜಾಗದಲ್ಲಿ ತಿಪ್ಪೆ, ಇತ್ಯಾದಿಗಳನ್ನು ಹಾಕಿಕೊಂಡು ನಿವೇಶಾನುಭವದಲ್ಲಿದ್ದಾರೆ.

ಹೀಗಿರುವಾಗ ನಿವೇಶನಾನುಭವದಲ್ಲಿರುವ ದಲಿತ ಕುಟುಂಬಗಳಿಗೆ ತಿಳಿಯದಂತೆ ಅಲ್ಲಿನ ಗ್ರಾಪಂ ಮಾಜಿ ಸದಸ್ಯರೊಬ್ಬರು ಜಾಗವನ್ನು ಖರೀದಿಸಿರುವಂತೆ ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದು, 2.24 ಎಕರೆ ಜಾಗವನ್ನು ದೌರ್ಜನ್ಯದಿಂದ ಪೊಲೀಸರ ರಕ್ಷಣೆಯಲ್ಲಿ ಒತ್ತುವರಿ ಮಾಡಲು ಮುಂದಾಗಿದ್ದಾರೆ.

Advertisements
chokkapura

ಚೊಕ್ಕಪುರ ಗ್ರಾಮ ನಕ್ಷೆಯ ಪ್ರಕಾರ ಆ ಜಾಗವು ಗ್ರಾಮಠಾಣಾ ಜಾಗವಾಗಿದ್ದು, ಇದೀಗ ಸ.ನಂಬರ್‌ 84 ಆಗಿ ಬದಲಾಗಿರುವುದು ದಶಕಗಳಿಂದ ಅದೇ ಜಾಗದಲ್ಲಿ ವಾಸವಿರುವ ದಲಿತ ಕುಟುಂಬಗಳನ್ನು ಆತಂಕಕ್ಕೆ ದೂಡುವಂತೆ ಮಾಡಿದೆ.

ಅಧಿಕಾರಿಗಳ ಶಾಮೀಲು?:
ನಾಲ್ಕೈದು ದಶಕಗಳಿಂದ ವಾಸವಿರುವ ದಲಿತ ಕುಟುಂಬಗಳು ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಅಧಿಕಾರಿಗಳು ಸ್ಪಂದಿಸದಿರುವುದು, ಸ್ಥಳ ಪರಿಶೀಲನೆಯನ್ನೂ ಮಾಡದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧವಿಲ್ಲಬೆಂಬಂತೆ ಹಾರಿಕೆ ಉತ್ತರಗಳನ್ನು ನೀಡುತ್ತಿದ್ದಾರೆ. ತುಳಿತಕ್ಕೊಳಗಾದ, ಅನಕ್ಷರಸ್ಥ ಕುಟುಂಬಗಳಿಗೆ ರಕ್ಷಣೆ ಕೊಡಬೇಕಾದ ಪೊಲೀಸ್‌ ಇಲಾಖೆ ಅನ್ಯಾಯದ ಪರ ನಿಂತಿದೆ. ದಲಿತರ ಮನವಿಯನ್ನು ಲೆಕ್ಕಿಸದೆ ತಾಲೂಕು ಆಡಳಿತ, ಸರ್ವೆ ಇಲಾಖೆ, ಗ್ರಾಪಂ, ಪೊಲೀಸ್‌ ಇಲಾಖೆಗಳು ಜಾಣಮೌನಕ್ಕೆ ಜಾರಿರುವುದು ಅಧಿಕಾರಿಗಳು ಸಹ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಶಂಕೆಗೆ ಕಾರಣವಾಗಿದೆ.

chokkapura12

ಗ್ರಾಪಂ ವತಿಯಿಂದ ನಮೂನೆ-9, 11 ವಿತರಣೆ
ಸರ್ವೆ ನಂಬರ್‌ 84 ಎಂದು ಮಾರ್ಪಾಡಾಗಿರುವ ಜಾಗದಲ್ಲಿರುವ ಕೆಲ ದಲಿತ ಕುಟುಂಬಗಳಿಗೆ ಈಗಾಗಲೇ ಚೌಡದೇನಹಳ್ಳಿ ಗ್ರಾಪಂ ವತಿಯಿಂದ ನಮೂನೆ-9 ಮತ್ತು ನಮೂನೆ-11 ಸಹ ನೀಡಲಾಗಿದ್ದು, 40-50 ವರ್ಷಗಳಿಂದ ಅದೇ ಜಾಗದಲ್ಲಿ ನೆಲೆಸಿರುವ ದಲಿತರನ್ನು ಒಕ್ಕಲೆಬ್ಬೆಸಲು ಹುನ್ನಾರ ಮಾಡಲಾಗಿದೆ. ಈ ಕುರಿತು ತಹಶೀಲ್ದಾರ್‌, ಎಸಿ, ಡಿಸಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೂ ಮನವಿ ಸಲ್ಲಿಸಿದ್ದೂ ಇದೂವರೆಗೆ ಯಾರೂ ಸ್ಪಂದಿಸಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿ ರಂಗಣ್ಣ.

ಈ ಜಾಗವನ್ನು ಬೆಂಗಳೂರಿನ ವ್ಯಕ್ತಿಯೊಬ್ಬರಿಂದ ನಾನು ಖರೀದಿಸಿದ್ದೇನೆ. ಈಗಾಗಲೇ ಸರ್ವೇ ಕಾರ್ಯ ಮುಗಿದಿದ್ದು, ಅದರಂತೆ ನಮ್ಮ ಜಾಗಕ್ಕೆ ಕಾಂಪೌಂಡ್‌ ಗೋಡೆ ಕಟ್ಟಲು ಮುಂದಾಗಿದ್ದೇವೆ. ಅವರ ಬಳಿ ದಾಖಲೆಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ ಎನ್ನುತ್ತಾರೆ ಒತ್ತುವರಿಗೆ ಮುಂದಾಗಿರುವ ಗ್ರಾಪಂ ಮಾಜಿ ಸದಸ್ಯ ಸದಾನಂದ.

ಒಟ್ಟಾರೆಯಾಗಿ ನಾಲ್ಕೈದು ದಶಕಗಳಿಂದ ವಾಸವಿರುವ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂಬುದು ದಲಿತ ಕುಟುಂಬಗಳ ಒತ್ತಾಯವಾಗಿದೆ.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X