ಚೆನ್ನೈ ಟೆಸ್ಟ್ | ಬೃಹತ್‌ ಮುನ್ನಡೆಯತ್ತ ಭಾರತ; 149 ರನ್‌ಗಳಿಗೆ ಬಾಂಗ್ಲಾ ಆಲೌಟ್

Date:

Advertisements

ಚೆನ್ನೈನ ಎಂ ಎ ಚಿದಂಬರಮ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಸಿಲುಕಿ 149 ರನ್‌ಗಳಿಗೆ ಆಲೌಟ್‌ ಆಗಿದೆ. ಫಾಲೋಆನ್‌ ಅವಕಾಶ ನೀಡದೆ ಎರಡನೇ ಇನಿಂಗ್ಸ್‌ ಆರಂಭಿಸಿರುವ ಭಾರತ ಎರಡನೇ ದಿನದಾಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 81 ರನ್‌ ಗಳಿಸಿ 308 ರನ್‌ಗಳ ಮುನ್ನಡೆ ಪಡೆದಿದೆ.

6 ವಿಕೆಟ್ ನಷ್ಟಕ್ಕೆ 339 ರನ್‌ಗಳೊಂದಿಗೆ ಎರಡನೇ ದಿನದಾಟ ಶುರುಮಾಡಿದ ಭಾರತ 91.2 ಓವರ್‌ಗಳಲ್ಲಿ ಆಲೌಟ್‌ ಆಯಿತು. ಟೀಂ ಇಂಡಿಯಾದ 376 ರನ್‌ ಮೊತ್ತಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113), ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್‌ (56) ಪ್ರಮುಖ ಕಾರಣಕರ್ತರಾದರು.

ನಂತರ ಮೊದಲ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಟೀಂ ಇಂಡಿಯಾದ ಬೌಲರ್‌ಗಳ ಕರಾರುವಾಕ್‌ ದಾಳಿಗೆ 47.1 ಓವರ್‌ಗಳಲ್ಲಿ 149 ರನ್‌ಗಳಿಗೆ ಆಲೌಟ್‌ ಆಗಿ 227 ರನ್‌ ಹಿನ್ನಡೆ ಅನುಭವಿಸಿತು. ಬೂಮ್ರಾ 50 ರನ್‌ಗಳಿಗೆ 4 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು. ಮೊಹಮದ್‌ ಸಿರಾಜ್‌, ಆಕಾಶ್ ದೀಪ್‌ ಹಾಗೂ ರವೀಂದ್ರ ಜಡೇಜಾ ಕೂಡ ತಲಾ 2 ವಿಕೆಟ್‌ ಕಿತ್ತು ಪ್ರವಾಸಿಗರ ಪತನಕ್ಕೆ ಕಾರಣರಾದರು.

Advertisements

ಈ ಸುದ್ದಿ ಓದಿದ್ದೀರಾ? ಬಾಂಗ್ಲಾ ವಿರುದ್ಧದ ಟೆಸ್ಟ್: ಮೊದಲ ಇನಿಂಗ್ಸ್‌ನಲ್ಲಿ 376 ಪೇರಿಸಿದ ಭಾರತ, ಪ್ರವಾಸಿಗರಿಗೆ ಆರಂಭಿಕ ಆಘಾತ

ಬಾಂಗ್ಲಾದೇಶದ ಪರ ಶಕೀಬ್‌(32), ಲಿಟ್ಟನ್(22), ಮೆಹದಿ(27) ಹಾಗೂ ಶಾಂಟೋ(20) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳ್ಯಾರು ಹೆಚ್ಚು ಪ್ರತಿರೋಧ ತೋರಲಿಲ್ಲ.

ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತ 23 ಒವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 81 ರನ್‌ ಗಳಿಸಿದೆ. ಶುಭಮನ್‌ ಗಿಲ್ ಅಜೇಯ 32 ಹಾಗೂ ರಿಷಬ್‌ ಪಂತ್‌ ಅಜೇಯ 12 ರನ್‌ ಗಳಿಸಿ ಆಡುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X