ಕೋಲಾರ | 2.33 ಲಕ್ಷ ನಿವ್ವಳ ಲಾಭ ಗಳಿಸಿದ ಚಿಕ್ಕನಹಳ್ಳಿ ಡೈರಿ

Date:

Advertisements

ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್‌ ಹೇಳಿದರು.

ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಮಾನ್ಯ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ ಸಂಘಕ್ಕೆ 2.33 ಲಕ್ಷ ನಿವ್ವಳ ಲಾಭ ಬಂದಿದ್ದು, ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ.2.10ರಷ್ಟು ಬೋನಸ್ ನೀಡಲಾಗುವುದು ಎಂದು ಹೇಳಿದರು.

Advertisements

ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜ. ಟೀಕೆಗಳನ್ನು ಮೆಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ. ಡೈರಿಗೆ ಹಾಲು ಉತ್ಪಾದಕರೇ ಶಕ್ತಿಯಾಗಿದ್ದು, ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದು ಸಲಹೆ ನೀಡಿದರು.

ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಹಾಲಿನ ಡೈರಿಗಳು ಅಭಿವೃದ್ಧಿಯಾಗಬೇಕಾದರೆ ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೈರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ. ಹಸುಗಳಿಗೆ ಹೊಸ ಹೊಸ ರೋಗಗಳು ಕಾಣಿಸುತ್ತಿದ್ದು, ಹೈನುಗಾರರಿಗೆ ಹಸು ಸಾಕಣೆ ತಲೆಬಿಸಿಯಾಗಿದೆ. ಅದಕ್ಕಾಗಿ ರೈತರು ಹೆಚ್ಚಿನ ಕಾಳಜಿವಹಿಸಿ ಕಾಲಕಾಲಕ್ಕೆ ವ್ಯಾಕ್ಸಿನೇಷನ್ ಮಾಡಿಸಬೇಕು ಎಂದರು.

ಸಭೆಯಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್.ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್‌, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆ‌ರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X