ಸರ್ಕಾರಿ ಅಧಿಕಾರಿ ಸೋಗಿನಲ್ಲಿ ಮದುವೆ ನೆಪದಲ್ಲಿ 50 ಮಹಿಳೆಯರಿಗೆ ವಂಚನೆ; ಆರೋಪಿ ಬಂಧನ

Date:

Advertisements

ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ.

ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು ಗುರುತಿಸಲಾಗಿದೆ. ಆತ, ವಿವಿಧ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳ ಮೂಲಕ ಮುಸ್ಲಿಂ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ವಂಚಿಸಿದ್ದಾನೆ. ಆತನ ವಂಚನೆಗೆ ತುತ್ತಾದ ಎಲ್ಲ ಮುಸ್ಲಿಂ ಮಹಿಳೆಯರು ಶ್ರೀಮಂತ ಕುಟುಂಬಗಳಿಗೆ ಸೇರಿದವರಾಗಿದ್ದಾರೆ. ಓರ್ವ ಸಂತ್ರಸ್ತೆ ನ್ಯಾಯಾಂಗದಲ್ಲಿ ಅಧಿಕಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಆರೋಪಿಯ ವಂಚನೆಗಳ ಬಗ್ಗೆ ವಿವರಗಳನ್ನು ಹಂಚಿಕೊಂಡಿರುವ ಡಿಸಿಪಿ (ಅಪರಾಧ) ಎಸ್‌ಕೆ ಸೈನ್, “ಮುಕೀಮ್ ಬಗ್ಗೆ ನಮಗೆ ರಹಸ್ಯ ಮಾಹಿತಿ ಸಿಕ್ಕಿದೆ. ಆತ ಮದುವೆಯ ನೆಪದಲ್ಲಿ ಹಲವಾರು ಮಹಿಳೆಯರನ್ನು ವಂಚಿಸಿದ್ದಾನೆ. ಆತನ ವಂಚನೆಗಳ ಬಗ್ಗೆ ಹಲವು ರಾಜ್ಯಗಳ ಪೊಲೀಸರಿಂದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Advertisements

“ಆರೋಪಿ ನೆಲೆಸಿದ್ದ ಹಲವಾರು ಗೌಪ್ಯ ಸ್ಥಳಗಳ ಮೇಲೆ ಪೊಲೀಸ್‌ ತಂಡಗಳು ದಾಳಿ ನಡೆಸಿವೆ. ಆತ ನಿರಂತರವಾಗಿ ತನ್ನ ವಾಸ್ತವ್ಯವನ್ನು ಬದಲಿಸುತ್ತಿದ್ದನು. ಆರೋಪಿ ಮುಕೀಮ್ ಗುಜರಾತ್‌ನಿಂದ ದೆಹಲಿಗೆ ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದರಿಂದಾಗಿ, ಆತನನ್ನು ನಿಜಾಮುದ್ದೀನ್ ರೈಲು ನಿಲ್ದಾಣದಲ್ಲಿ ಬಂಧಿಸಲು ಸಾಧ್ಯವಾಯಿತು” ಎಂದು ವಿವರಿಸಿದ್ದಾರೆ.

“ಸರ್ಕಾರಿ ಅಧಿಕಾರಿಯಂತೆ ನಟಿಸುವ ಮೂಲಕ ಮುಸ್ಲಿಂ ಸಮುದಾಯದ ಅವಿವಾಹಿತೆಯರು, ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಳ್ಳುತ್ತಿದ್ದನು. ಮಹಿಳೆಯರೊಂದಿಗೆ ನಾಚೂಕಿನಿಂದ ಮಾತನಾಡುವ ಮೂಲಕ, ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುತ್ತಿದ್ದನು. ಬಳಿಕ, ಮದುವೆಯಾಗುವುದಾಗಿ ನಂಬಿಸಿ ಹಣ, ಒಡವೆಗಳನ್ನು ದೋಚುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X