ಚಿಕ್ಕಬಳ್ಳಾಪುರ | ಆರ್.ಅಶೋಕ್‌, ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ : ಸಚಿವ ಕೃಷ್ಣ ಭೈರೇಗೌಡ

Date:

Advertisements

ಶಾಸಕ ಮುನಿರತ್ನ ಭ್ರಷ್ಟಾಚಾರ, ಅನ್ಯಾಯ, ಹನಿಟ್ರ್ಯಾಪ್‌ ಮಾಫಿಯಾ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಛೀಮಾರಿ

ಅತ್ಯಾಚಾರ, ಸೆಕ್ಸ್‌ ಹನಿಟ್ರ್ಯಾಪ್‌, ಏಡ್ಸ್‌ ಹರಡಿಸುವ ವ್ಯವಸ್ಥಿತ ಮಾಫಿಯಾದಲ್ಲಿ ಶಾಸಕ ಮುನಿರತ್ನ ಭಾಗಿಯಾಗಿದ್ದು, ಇಂತಹವರನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿಯ ಆರ್.ಅಶೋಕ್‌ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಿಡಿಕಾರಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಜೋಡಿಗ್ರಾಮಗಳ ಪಹಣಿ ವಿತರಣೆ ಕಾರ್ಯಕ್ರಮದ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುನಿರತ್ನ ಭ್ರಷ್ಟಾಚಾರಿ ಎಂಬುದು ಎಲ್ಲರಿಗೂ ತಿಳಿದಿದ್ದ ವಿಚಾರ. ಅವರ ಮನೆಯಲ್ಲೇ ಬಿಬಿಎಂಪಿ ಬಿಲ್‌ ಬರೀತಾರೆ ಎಂಬುದು ಮೊದಲೇ ತಿಳಿದಿತ್ತು. ಗುತ್ತಿಗೆದಾರನ ಬಳಿ ಲಂಚ ಕೇಳಿರುವುದು, ಸರಕಾರಿ ಮಹಿಳಾ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು, ಅವರನ್ನು ಹೆದರಿಸಿ, ರಾಜಕಾರಣಿಗಳನ್ನ ಹನಿಟ್ರ್ಯಾಪ್‌ ಮಾಡಿರುವುದು ದೂರುಗಳಿಂದ ಬೆಳಕಿಗೆ ಬಂದಿದೆ ಎಂದರು.

Advertisements

ಬಿಜೆಪಿ ನಾಯಕರ ಕುಮ್ಮಕ್ಕು ಶಂಕೆ :
ವ್ಯವಸ್ಥಿತವಾದ ಏಡ್ಸ್‌ ಮತ್ತು ಹನಿಟ್ರ್ಯಾಪ್‌ ಮಾಫಿಯಾ ನಡೆಸುತ್ತಿದ್ದರು ಎಂಬುದು ನಿಜಕ್ಕೂ ಅಘಾತಕಾರಿ ವಿಚಾರವಾಗಿದ್ದು, ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತೆ ನೀಡಿದ ದೂರಿನಿಂದ ಇದು ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷದವರೇ ದೂರು ನೀಡಿದ್ದರೂ, ಮುನಿರತ್ನ ಅವರನ್ನ ಸಮರ್ಥಿಸಿಕೊಳ್ಳುತ್ತಿರುವುದನ್ನ ನೋಡಿದರೆ, ಈ ಎಲ್ಲಾ ಅಕ್ರಮಗಳಿಗೆ ಬಿಜೆಪಿ ನಾಯಕರೂ ಕುಮ್ಮಕ್ಕು ನೀಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಅಷ್ಟೇ ಅಲ್ಲ, ದಲಿತರ, ಒಕ್ಕಲಿಗರ ನಿಂದನೆ, ಸೆಕ್ಸ್‌ ಟ್ರ್ಯಾಪ್‌, ಏಡ್ಸ್‌ ಮಾಫಿಯಾ ಕುರಿತು ತನಿಖೆಯಾಗಬೇಕೆಂದು ಈಗಾಗಲೇ ಸಿಎಂ ಅವರೊಂದಿಗೆ ಚರ್ಚಿಸಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದರೆ ಸೂಕ್ತ ತನಿಖೆಯಾಗಬೇಕು. ಇದರಿಂದ ಸತ್ಯ ಹೊರಬರಬೇಕು ಎಂದರು.

ಡಿನೋಟಿಫಿಕೇಶನ್‌ ಹಗರಣ ಎಸ್.ಐ.ಟಿ ತನಿಖೆಯಾಗಲಿ :
ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರೂ ಸೇರಿ ಸ್ವಂತ ಲಾಭಕ್ಕಾಗಿ ಬೆಂಗಳೂರಿನ ಗಂಗೇನಹಳ್ಳಿಯಲ್ಲಿ ನೂರಾರು ಕೋಟಿ ಬೆಲೆಬಾಳುವ 1.11 ಎಕರೆ ಜಾಗವನ್ನು ಡಿನೋಟಿಫೀಕೇಶನ್‌ ಮಾಡಿಸಿಕೊಂಡು ಅವರ ಕುಟುಂಬಸ್ಥರ ಹೆಸರಿಗೆ ಮಾಡಿಸಿಕೊಂಡಿರುವ ಕುರಿತು ದಾಖಲೆ ಸಮೇತ ಮುಂದಿಟ್ಟಿದ್ದೇವೆ. ಪ್ರಧಾನ ಕಾರ್ಯದರ್ಶಿಯವರ ಹಿಂಬರಹವನ್ನು ಉಲ್ಲಂಘಿಸಿ ಡಿನೋಟಿಪೀಕೇಶನ್‌ ಮಾಡಿದ್ದಾರೆ. ಸತ್ತವರ ಹೆಸರಲ್ಲಿ ಡಿನೋಟಿಫಿಕೇಶನ್‌ ಮಾಡಿದ್ದಾರೆ. ಇದರ ಬಗ್ಗೆ ಅವರು ಉತ್ತರ ಕೊಡಲಿ ಎಂದು ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್‌-ಮುನಿರತ್ನ ತೋರಿದ ಪಾತಕದ ಮಾದರಿ ಎಂಥವು? ಮಿಕ್ಕವರು ಅನುಸರಿಸಿದರೆ ಹೆಣ್ಣುಮಕ್ಕಳ ಪಾಡೇನು?

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌, ನಗರ ಶಾಸಕ ಪ್ರದೀಪ್‌ ಈಶ್ವರ್‌, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X