ಐಪಿಎಲ್‌ 2023 | ಹಾರ್ದಿಕ್‌ ಹೋರಾಟ ವ್ಯರ್ಥ; ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಗೆಲುವು

Date:

Advertisements

ಬ್ಯಾಟಿಂಗ್‌ನಲ್ಲಿ ಸಾಮನ್ಯ ಮೊತ್ತ ಪೇರಿಸಿದರೂ ಸಹ, ಬಿಗು ಬೌಲಿಂಗ್‌ ದಾಳಿ ಸಂಘಟಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌  ವಿರುದ್ಧ ರೋಚಕ ಜಯ ಸಾಧಿಸಿದೆ.

ಐಪಿಎಲ್‌ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನಿ ಗುಜರಾತ್‌ ಟೈಟನ್ಸ್‌ ತಂಡವನ್ನು ಅವರದ್ದೇ ಮೈದಾನದಲ್ಲಿ 5 ರನ್‌ಗಳ ಅಂತರದಲ್ಲಿ ಮಣಿಸಿದೆ.

ಮೂರನೇ ಕ್ರಮಾಂಕದಲ್ಲಿ ಆಡಲಿಳಿದು 53 ಎಸೆತಗಳಲ್ಲಿ 59 ರನ್‌ ಗಳಿಸಿ ಅಜೇಯರಾಗುಳಿದರೂ ಸಹ ನಾಯಕ ಹಾರ್ದಿಕ್‌ ಪಾಂಡ್ಯಾಗೆ ತಂಡವನ್ನು ಗೆಲುವಿನತ್ತ ಮುನ್ನಡೆಸಲಾಗಲಿಲ್ಲ.

Advertisements

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 8 ವಿಕೆಟ್‌ ನಷ್ಟದಲ್ಲಿ 130 ರನ್‌ಗಳಿಸಿತ್ತು. ಸಾಮಾನ್ಯ ಸವಾಲಿನ ಚೇಸಿಂಗ್‌ ವೇಳೆ ಟೈಟನ್ಸ್‌ ಗೆಲುವಿಗೆ ಅಂತಿಮ 9 ಎಸೆತಗಳಲ್ಲಿ 30 ರನ್‌ಗಳ ಕಠಿಣ ಗುರಿ ಮುಂದಿತ್ತು. ಆದರೆ ಅನ್ರಿಚ್ ನಾರ್ಟ್ಜೆ ಎಸೆದ 19ನೇ ಓವರ್‌ನ ಅಂತಿಮ 3 ಎಸೆತಗಳಲ್ಲಿ ಹ್ಯಾಟ್ರಿಕ್‌ ಸಿಕ್ಸ್‌ ಬಾರಿಸಿದ ತೆವಾಟಿಯ ಪಂದ್ಯಕ್ಕೆ ರೋಚಕ ತಿರುವು ತಂದುಕೊಟ್ಟರು.

ಅಂತಿಮ ಓವರ್‌ನಲ್ಲಿ ಗುಜರಾತ್‌ ಗೆಲುವಿಗೆ 12 ರನ್‌ಗಳ ಅಗತ್ಯವಿತ್ತು. ಆದರೆ 6 ರನ್‌ ನೀಡಿ ತೆವಾಟಿಯ ವಿಕೆಟ್‌ ಪಡೆದ ಅನುಭವಿ ಬೌಳರ್‌ ಇಶಾಂತ್‌ ಶರ್ಮಾ ಡೆಲ್ಲಿಯ ಗೆಲುವಿನ ರುವಾರಿಯಾದರು.

23 ರನ್‌ಗಳಿಗೆ 5 ವಿಕೆಟ್‌ !

ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 23 ರನ್‌ಗಳಿಸುವಷ್ಟರಲ್ಲೇ 5 ಪ್ರಮುಖ ವಿಕೆಟ್‌ ಕಳೆದುಕೊಂಡಿತ್ತು.  ಆದರೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಂದ ಅಮಾನ್‌ ಹಕೀಮ್‌ ಖಾನ್‌ ಭರ್ಜರಿ ಅರ್ಧಶತಕ ಸಿಡಿಸಿ ಡೆಲ್ಲಿ ಪಾಲಿಗೆ ರಕ್ಷಕನಾದರು.

44 ಎಸೆತಗಳನ್ನು ಎದುರಿಸಿದ ಖಾನ್‌ ತಲಾ 3 ಬೌಂಡರಿ ಮತ್ತು ಸಿಕ್ಸರ್‌ಗಳ ನೆರವಿನಿಂದ 51 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.   

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X