ಕಲಬುರಗಿ | ಡಿಡಿ ಕಟ್ಟಿ ವರ್ಷ ಕಳೆದರೂ ಸಹ ಹಕ್ಕುಪತ್ರ ನೀಡುತ್ತಿಲ್ಲ : ಸ್ಲಂ ಜನಾಂದೋಲನ ಆಕ್ರೋಶ

Date:

Advertisements

ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ.

ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷತೆಯನ್ನು ಖಂಡಿಸಿ ಸ್ಲಂ ಜನಾಂದೋಲನ ಜಿಲ್ಲಾ ಘಟಕ, ಕಲಬುರಗಿ ವತಿಯಿಂದ ಕರ್ನಾಟಕ ಕಾರ್ಯಪಾಲಕ ಅಭಿಯಂತರರು ಕೊಳಗೇರಿ ಅಭಿವೃದ್ಧಿ ಮಂಡಳಿ,ಕಲಬುರಗಿ ಕಛೇರಿ ಎದುರುಗಡೆ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಧರಣಿಯನ್ನುದೇಶಿಸಿ ಜಿಲ್ಲಾ ಸಂಚಾಲಕರಾದ ರೇಣುಕಾ ಸರಡಗಿ ಮಾತನಾಡಿ, “ಹಕ್ಕು ಪತ್ರಕ್ಕಾಗಿ ಡಿ.ಡಿ ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ, ದಿನಾಲೂ ಒಂದಲ್ಲ ಒಂದು ನೆಪ ಹೇಳಿ, ಜನರಿಗೆ ಅಲೆದಾಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

Advertisements
WhatsApp Image 2024 09 19 at 4.39.38 PM

“ಸ್ಲಂ ಘೋಷಣೆ ಅರ್ಜಿ ಹಾಕಿ ಮೂರು ವರ್ಷ ಗತಿಸಿದರೂ ಸಹ ಘೋಷಣೆ ಪ್ರಕ್ರಿಯೆಯೇ ಪ್ರಾರಂಭ ಮಾಡಿಲ್ಲದ ಕಾರಣ ಹಕ್ಕು ಪತ್ರ ನೀಡುವವರೆಗೆ, ಸ್ಲಂ ಘೋಷಣೆ ಆಗುವವರೆಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ, ಕಛೇರಿ ಎದುರುಗಡೆ ನಿರಂತರ ಧರಣಿ ಸತ್ಯಗ್ರಾಹ ನಡೆಸುತ್ತೇವೆ” ಎಂದು ತಿಳಿಸಿದರು.

“ಘೋಷಿಸಿತ ಸ್ಲಂಗಳಾದ ಸಂಜುನಗರ, ಸಿದ್ದರೂಢ ನಗರ, ರಾಮನಗರ ಭಾಗ ಘೋಷಣೆ ಮಾಡಬೇಕು ” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೌರಮ್ಮ ಮಾಕಾ, ಶರಣಪ್ಪ ವಿದ್ಯನಗರ, ಭಾಗ್ಯವಂತ ರಾವ್ ಪಂಚಶೀಲ‌ನಗರ, ಕೆ.ಕೆ‌ನಗರ್, ಬುದ್ಧ ನಗರ, ಸಂಜು ನಗರ, ರಾಮ ನಗರ್, ಸಿದ್ದೇಶ್ವರ ಕಾಲೊನಿ, ಸಿದ್ದರೂಢ ನಗರದ ಸ್ಲಂ ನಿವಾಸಿಗಳು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X