ಮಣಿಪುರ ಹಿಂಸಾಚಾರ | ಗ್ರಾಹಕ ವ್ಯವಹಾರಗಳ ಸಚಿವರ ಆಪ್ತ ಸಹಾಯಕನ ಅಪಹರಣ

Date:

Advertisements

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈವರೆಗೆ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಇದೀಗ, ಮಣಿಪುರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವ ಎಲ್ ಸುಸಿಂದ್ರೋ ಅವರ ಆಪ್ತ ಸಹಾಯಕರನ್ನು ಶಸ್ತ್ರಸಜ್ಜಿತ ಗುಂಪೊಂದು ಅಪಹಿರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿವ ಎಲ್ ಸುಸಿಂದ್ರೋ ಅವರ ಆಪ್ತ ಸಹಾಯಕ ಎಸ್‌ ಸೊಮೊರೆಂಡ್ರೋ (43) ಅವರನ್ನು ಇಂಫಾಲ್ ಪೂರ್ವ ಜಿಲ್ಲೆಯಲ್ಲಿರುವ ಅವರ ನಿವಾಸದ ಬಳಿ ಗುಂಪೊಂದು ಅಪಹರಿಸಿದೆ. ಅಪಹರಣದ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಅವರ ರಕ್ಷಣೆಗಾಗಿ ಪೊಲೀಸರು ಹುಡುಕಾಟ ಮತ್ತು ತನಿಖೆ ನಡಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಷ್ಣುಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ, ಮಣಿಪುರ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಓಯಿನಮ್ ನಬಕಿಶೋರ್ ಅವರ ಮನೆ ಮೇಲೆ ಶಸ್ತ್ರಸಜ್ಜಿತ ಗುಂಪೊಂದು ದಾಳಿ ಮಾಡಿತ್ತು. ಐದಕ್ಕೂ ಹೆಚ್ಚು ಮಂದಿ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೈದಿತ್ತು. ಈ ಘಟನೆ ನಡೆದ ಒಂದು ದಿನದ ಬಳಿಕ, ಸಚಿವರ ಆಪ್ತ ಸಹಾಯಕನ ಅಪಹರಣವಾಗಿದೆ.

Advertisements

ಅಪಹರಣ ಸ್ಥಳದಲ್ಲಿ ಬಿದ್ದಿದ್ದ ಖಾಲಿ ಕಾಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಿಷ್ಣುಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಅವರನ್ನು ರಕ್ಷಿಸಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ನಾವು ಕೆಲವರ ಮೇಲೆ ನಿಗಾ ಇಡುತ್ತಿದ್ದೇವೆ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ವಿವರ ನೀಡಲಾಗದು” ಎಂದು ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X