ಬಾಗಲಕೋಟೆ | ಮನರೇಗಾ ಕೂಲಿ ಕೆಲಸಕ್ಕಾಗಿ ಕಾರ್ಮಿಕರ ಆಗ್ರಹ

Date:

Advertisements

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯಡಿ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ತಾಲೂಕಿನ ಮೆಳ್ಳಿಗೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು, “ಹಲವಾರು ದಿನಗಳಿಂದ ಕೂಲಿ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗೆ ಎಡತಾಕುತ್ತಿದ್ದರೂ ಅಧಿಕಾರಿಗಳು ಕೆಲಸ ನೀಡುತ್ತಿಲ್ಲ. ಸರಿಯಾದ ರೀತಿಯಲ್ಲಿ ಜಾಬ್ ಕಾರ್ಡ್ ನೀಡುತ್ತಿಲ್ಲ. ಕೂಡಲೇ ನಮಗೆ ಕೂಲಿ ಕೆಲಸ ನೀಡಬೇಕು” ಎಂದು ಒತ್ತಾಯಿಸಿದರು.

“ದಿನಗೂಲಿ ಸಿಗದೆ ಬೇರೆ ಊರಿಗೆ ಕೆಲಸ ಹರಸಿ ಹೋಗಬೇಕಾದ ಪರಿಸ್ಥಿತಿಯಿದೆ. ಇದ್ದ ಊರಿನಲ್ಲಿಯೇ ಕೆಲ‌ಸ ಮಾಡಬೇಕೆಂದರೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದವರು ಮನರೇಗಾ ಕೆಲಸ ನೀಡುತ್ತಿಲ್ಲ. ಇನ್ನುಮುಂದೆ ಕೂಲಿ ಕೆಲಸ ನೀಡದೆ ಹೋದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

Advertisements

ಗ್ರಾಮಸ್ಥರು ಕೆಲಸ ಕೇಳಿಕೊಂಡು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆಗೆ ಕುಳಿತ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ತಾಲೂಕು ಪಂಚಾಯಿತಿ ಇಒ ಪ್ರತಿಭಟನೆ ನೇತೃತ್ವ ಹೊತ್ತಿದ್ದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕ ಶಂಕರ ಅವರೊಂದಿಗೆ ಏಕವಚನದಲ್ಲಿ ಏರುಧ್ವನಿಯಲ್ಲಿ ಮಾತು ಬೆಳೆಸಿದರು. ಇದೇ ವೇಳೆ ಘಟನೆಯನ್ನು ವಿಡಿಯೋ ಮಾಡುತ್ತಿದ್ದ ಮಹಿಳೆಯೋರ್ವಳಿಗೆ ವಿಡಿಯೋ ಮಾಡದಂತೆ ತಾಕೀತು ಮಾಡಿರುವುದು ಕಂಡುಬಂದಿದೆ.

ಇಒ ಉಮೇಶ ಸಿದ್ನಾಳ ನಡೆಗೆ ಕೋಪಗೊಂಡ ಗ್ರಾಮಸ್ಥರು, “ನೀವು ಬಡವರಿಗೆ ಕೆಲಸ ಕೊಡಿಸಲು ಬಂದಿದ್ದೀರೋ? ಅಥವಾ ನಮ್ಮನ್ನು ಹೆದರಿಸಲು ಬಂದಿದ್ದೀರೋ?” ಎಂದು ಆಕ್ರೋಶಗೊಂಡ ಕಾರ್ಮಿಕರು, ಮೊದಲು ಕೆಲಸ ನೀಡುವಂತೆ ಪಟ್ಟುಹಿಡಿದರು. ಆಗ ಗ್ರಾಮಸ್ಥರೊಂದಿಗೆ ಮಾತನಾಡಿದ ಇಒ ಶೀಘ್ರದಲ್ಲಿಯೇ ಗ್ರಾಮಸ್ಥರಿಗೆ ಕೂಲಿ ಕೆಲಸ‌ ನೀಡುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನ: ಪೋಸ್ಟರ್ ಬಿಡುಗಡೆ

ಗ್ರಾಮದ ಜನತೆ ಕೆಲಸಕ್ಕಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುತ್ತಿದ್ದರೆ ಅಲ್ಲಿನ ಪಿಡಿಒ 12 ಗಂಟೆಯಾದರೂ ಕಚೇರಿಗೆ ಆಗಮಿಸಿರಲಿಲ್ಲ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಪ್ರತಿಭಟನಾಕಾರರು ಅಭಿವೃದ್ಧಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುವುದಿಲ್ಲವೆಂದು ದೂರಿದರು.

ಮೆಳ್ಳಿಗೇರಿ ಗ್ರಾಮದಲ್ಲಿ ಸದ್ಯ ಜಾಬ್ ಕಾರ್ಡ್ ಇರುವ ಜನರಿಗೆ ಶೀಘ್ರವೇ ಉದ್ಯೋಗ ನೀಡಲಾಗುವುದು. ಜಾಬ್ ಕಾರ್ಡ್ ಇಲ್ಲದಿರುವ ಜನರನ್ನು ಗುರುತಿಸಿ ಅವರಿಗೆ ಜಾಬ್ ಕಾರ್ಡ್ ವ್ಯವಸ್ಥೆ ಮಾಡಿ ಆ ನಂತರದಲ್ಲಿ ಕೆಲಸ ನೀಡಲಾಗುವುದು.

ಈರಮ್ಮ, ಶ್ರೀದೇವಿ, ಸಿದ್ದವ್ವ, ಗೀತಾ, ರಾಧಿಕಾ, ಸಿದ್ದಪ್ಪ, ಶಿವು, ಸವಿತಾ, ಶಿಲ್ಪಾ, ರವಿ, ಬಸವರಾಜು ಗ್ರಾಕೂಸ ಜಿಲ್ಲಾ ಸಂಚಾಲಕ ಶಂಕರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X