ನಾಗಮಂಗಲ ಗಲಭೆ ಪ್ರಕರಣ | ಬಂಧನಕ್ಕೆ ಹೆದರಿ ಗ್ರಾಮ ತೊರೆದಿದ್ದ ಯುವಕ ‘ಬ್ರೈನ್ ಸ್ಟ್ರೋಕ್‌’ನಿಂದ ಸಾವು ವದಂತಿ; ಪೊಲೀಸರ ಸ್ಪಷ್ಟನೆ

Date:

Advertisements

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ತಮ್ಮನ್ನೂ ಬಂಧಿಸಬಹುದೆಂಬ ಭಯದಲ್ಲಿ ಊರು ತೊರೆದಿದದ ಯುವಕ ‘ಬ್ರೈನ್‌ ಸ್ಟ್ರೋಕ್‌’ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಡ್ಯ ಪೊಲೀಸರು, ‘ಮೃತ ಯುವಕ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿಲ್ಲ’ ಎಂದು ತಿಳಿಸಿದ್ದಾರೆ.

ಶನಿವಾರ, ವರದಿ ಮಾಡಿದ್ದ ಮಾಧ್ಯಮಗಳು, “ನಾಗಮಂಗಲ ಗಲಭೆ ಪ್ರಕರಣದಲ್ಲಿ ಬದ್ರಿಕೊಪ್ಪಲು ಗ್ರಾಮದ ಕಿರಣ್ ಕೂಡ ಆರೋಪಿಯಾಗಿದ್ದ. ಬಂಧನ ಭೀತಿಯಿಂದ ಕಿರಣ್ ತಮ್ಮ ಗ್ರಾಮವನ್ನು ತೊರೆದು, ತಲೆಮರೆಸಿಕೊಂಡಿದ್ದರು. ಇದೀಗ, ಅವರು ‘ಬ್ರೈನ್ ಸ್ಕ್ರೋಕ್‌’ನಿಂದ ಸಾವನ್ನಪ್ಪಿದ್ದಾರೆ. ಗಲಭೆ ಪ್ರಕರಣದಲ್ಲಿ ಕಿರಣ್ ಅವರ ತಂದೆಯೂ 17ನೇ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದ್ದವು.

ಈ ವರದಿಯನ್ನು ಅಲ್ಲಗಳೆದಿರುವ ಪೊಲೀಸರು, “ಬ್ರೈನ್ ಸ್ಟ್ರೋಕ್‌ನಿಂದ ಸಾವನ್ನಪ್ಪಿರುವ ಯುವಕ ಕಿರಣ್, ಗಲಭ ಪ್ರಕರಣದಲ್ಲಿ ಆರೋಪಿಯಲ್ಲ. ಗಲಭೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದದ್ದು ಕಿರಣ್ ಕುಮಾರ್ ಎಸ್‌ ಎಂಬಾತ. ಆತನನ್ನು ಬಂಧಿಸಲಾಗಿದೆ. ಆತನನ್ನು ಮಂಡ್ಯದ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸಾವನ್ನಪ್ಪಿರುವ ಕಿರಣ್‌ಗೂ ಗಲಭೆ ಪ್ರಕರಣಕ್ಕೂ ಸಂಬಂಧವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

Advertisements
WhatsApp Image 2024 09 22 at 8.51.50 AM

ಗಲಭೆ ಪ್ರಕರಣದಲ್ಲಿ ಈವರೆಗೆ ಪೊಲೀಸರು 52 ಮಂದಿಯನ್ನು ಬಂಧಿಸಿದ್ದಾರೆ. ಅವರಲ್ಲಿ, ಬದ್ರಿಕೊಪ್ಪಲು ಗ್ರಾಮದ 13 ಮಂದಿ ಸೇರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X