ಗುಬ್ಬಿ | ಸ್ಥಳೀಯ ಪಪಂ ಆಯೋಜಿಸಿದ ಪೌರ ಕಾರ್ಮಿಕರ ಕ್ರೀಡಾಕೂಟ

Date:

Advertisements

ಹಗ್ಗಜಗ್ಗಾಟ, ಗುಂಡು ಎಸೆತ, ಮಡಿಕೆ ಹೊಡೆಯುವುದು, ನಿಂಬೆ ಚಮಚ ಓಟ, ಮ್ಯೂಸಿಕಲ್ ಚೇರ್ ಹೀಗೆ ಅನೇಕ ಕ್ರೀಡೆಗಳ ಆಟವಾಡಿದ ಪೌರ ಕಾರ್ಮಿಕರು ನಿತ್ಯದ ಜಂಜಾಟದಿಂದ ಹೊರತಾದ ಮನರಂಜನೆ ಅನುಭಿಸಲು ಸ್ಥಳೀಯ ಪಟ್ಟಣ ಪಂಚಾಯಿತಿ ಎಲ್ಲಾ ಪೌರ ಸಿಬ್ಬಂದಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ಕ್ರೀಡಾಕೂಟವನ್ನು ಉದ್ಘಾಟಿಸಿದ ಪಪಂ ಅಧ್ಯಕ್ಷೆ ಮಂಗಳಮ್ಮ ಹಾಗೂ ಉಪಾಧ್ಯಕ್ಷೆ ಮಮತಾ ಪಟ್ಟಣ ಸ್ವಚ್ಚತೆ ಬಗ್ಗೆ ನಿತ್ಯ ತಮ್ಮನ್ನೇ ತೊಡಗಿಸಿಕೊಂಡ ಕಾರ್ಮಿಕರು ಪೌರ ಕಾರ್ಮಿಕರ ದಿನಾಚರಣೆಯನ್ನು ಸಂತೋಷದಿಂದ ಆಚರಣೆ ಮಾಡಲು ಈ ವಿಶೇಷ ಕ್ರೀಡಾಕೂಟ ಆಯೋಜಿಸಲಾಗಿದೆ. ಮಹಿಳೆಯರು, ಪುರುಷರಿಗೆ ಪ್ರತ್ಯೇಕ ಆಟಗಳನ್ನು ಸ್ಥಳೀಯ ಶ್ರೀ ಚನ್ನಬಸವೇಶ್ವರ ಯುವಕ ಸಂಘ ಅಚ್ಚುಕಟ್ಟಾಗಿ ನಿರ್ವಹಿಸಿತು.

ಕ್ರೀಡಾಕೂಟಕ್ಕೆ ಶುಭ ಕೋರಿದ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಸಿ.ಕೃಷ್ಣಮೂರ್ತಿ, ಆನಂದ್ ಎಲ್ಲಾ ಆಟದಲ್ಲೂ ತಮ್ಮನ್ನು ತೊಡಗಿಸಿಕೊಂಡು ಪೌರ ಕಾರ್ಮಿಕರ ಜೊತೆ ಸಂತಸ ಹಂಚಿಕೊಂಡರು. ಕ್ರೀಡಾ ಮನೋಭಾವ, ಸ್ಫೂರ್ತಿ ತುಂಬಿ ಕ್ರೀಡೆಯಲ್ಲಿ ತೊಡಗುವ ಜೊತೆಗೆ ಕಾರ್ಮಿಕರ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ ಎಂದು ತಿಳಿಸಿದರು.

Advertisements

ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ, ಸಿಬ್ಬಂದಿಗಳಾದ ಲೋಕನಾಥ್, ಪ್ರೀತಂ, ಆಂತರಾಜು, ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಕಾರ್ಯದರ್ಶಿ ಸಿ.ಆರ್. ಶಂಕರ್ ಕುಮಾರ್, ದೈಹಿಕ ಶಿಕ್ಷಕ ಗಿರೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X