ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ ಕುರಿತಾದ ಎನ್‌ಸಿಇಆರ್‌ಟಿ ಮಾಡ್ಯೂಲ್ ಜಾರಿಗೆ ತರಲು ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

Date:

Advertisements

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರೂಪಿಸಿರುವ “ಶಾಲಾ ಶಿಕ್ಷಣ ಪ್ರಕ್ರಿಯೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ” ಕುರಿತಾದ ಕರಡು ಮಾಡ್ಯೂಲ್‌ ಜಾರಿಗೆ ತರುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮದ್ರಾಸ್ ಹೈಕೋರ್ಟ್ ಈಚೆಗೆ ನಿರ್ದೇಶಿಸಿದೆ.

ಎನ್‌ಸಿಇಆರ್‌ಟಿಯ ಕರಡು ಮಾಡ್ಯೂಲ್ ಅನ್ನು ಎರಡು ವರ್ಷಗಳ ಹಿಂದೆಯೇ ಸಚಿವಾಲಯದ ಪರಿಗಣನೆಗೆ ಕಳುಹಿಸಲಾಗಿದ್ದರೂ ಸಚಿವಾಲಯ ಅದಕ್ಕೆ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಸೆಪ್ಟೆಂಬರ್ 18ರಂದು ಹೊರಡಿಸಿದ ಆದೇಶ ತಿಳಿಸಿದೆ.

ಸಚಿವಾಲಯದ ಬಳಿ ಸಾಕಷ್ಟು ಸಮಯದಿಂದ ಈ ವಿಚಾರ ಬಾಕಿ ಉಳಿದಿದೆ. ಮಾಡ್ಯೂಲ್‌ ಅನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲು ಯೋಜಿಸಲಾಗಿತ್ತು. ಆದರೆ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದರೂ ಸಚಿವಾಲಯ ಇನ್ನೂ ಪ್ರತಿಕ್ರಿಯಿಸಿಲ್ಲ. ಸಚಿವಾಲಯ ಸೂಕ್ಷ್ಮತೆಯಿಂದ ಈ ವಿಚಾರವಾಗಿ ವರ್ತಿಸಿ ಎನ್‌ಸಿಇಆರ್‌ಟಿ ಸಲ್ಲಿಸಿ ಕರಡು ಮಾಡ್ಯೂಲ್‌ ಜಾರಿಗೆ ತರುತ್ತದೆ ಎಂಬ ನಿರೀಕ್ಷೆ ಇದೆ ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಪುಣೆ: ಕೆಲಸದ ಒತ್ತಡದಿಂದ ಸಿಎ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಸಚಿವಾಲಯ ಈ ವಿಚಾರಕ್ಕೆ ಅಗತ್ಯ ಆದ್ಯತೆ ನೀಡಿ ತಾನು ಮುಂದಿನ ವಿಚಾರಣೆ ನಡೆಸಲಿರುವ ಜನವರಿ 6, 2025 ರೊಳಗೆ ಶಾಲೆಗಳಲ್ಲಿ ಇದನ್ನು ಜಾರಿಗೆ ತರಬೇಕು ಎಂದು ಅದು ಹೇಳಿದೆ.

ಸಲಿಂಗ ಪ್ರೇಮಿ ಜೋಡಿಯೊಂದು ತನ್ನ ಸಂಬಂಧಿಕರಿಂದ ತಮಗೆ ರಕ್ಷಣೆ ನೀಡಬೇಕೆಂದು ಹೈಕೋರ್ಟ್‌ಗೆ ಈ ಹಿಂದೆ ಮೇಲ್ಮನವಿ ಸಲ್ಲಿಸಿತ್ತು. ಆ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ವೆಂಕಟೇಶ್‌ ಈ ನಿರ್ದೇಶನ ನೀಡಿದ್ದಾರೆ.  ವಿಚಾರಣೆ ಅವಧಿಯಲ್ಲಿ ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳ ಏಳಿಗೆಗೆ ಸಂಬಂಧಿಸಿದಂತೆ ನ್ಯಾಯಾಲಯ ಹಲವು ಸೂಚನೆಗಳನ್ನು ನೀಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X