ಬೆಂಗಳೂರು | ಮುರಿದು ಬಿದ್ದ ಬಿಬಿಎಂಪಿ ಮೈದಾನದ ಗೇಟ್ : ಬಾಲಕ ಮೃತ್ಯು

Date:

Advertisements

ಬಿಬಿಎಂಪಿ ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.

ಘಟನೆಯಿಂದ ಮೃತಪಟ್ಟ ಬಾಲಕನನ್ನು ನಿರಂಜನ್ (10) ಎಂದು ಗುರುತಿಸಲಾಗಿದೆ. ಭಾನುವಾರ ರಜಾದಿನವಾದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಮೈದಾನಕ್ಕೆ ಆಟವಾಡಲೆಂದು ಸಂಜೆ 4 ಗಂಟೆ ಸುಮಾರಿಗೆ ಬಂದಿದ್ದು, ಈ ವೇಳೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

WhatsApp Image 2024 09 22 at 7.07.29 PM

ಆಟವಾಡಲು ಮೈದಾನಕ್ಕೆ ಬಂದಿದ್ದ ನಿರಂಜನ್, ಗೇಟ್ ಬಳಿಯೇ ನಿಂತಿದ್ದನು. ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ

ಮೃತಪಟ್ಟಿರುವ ಬಾಲಕ ನಿರಂಜನ್ ಮಲ್ಲೇಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮಲ್ಲೇಶ್ವರಂನ ಪೈಪ್‌ಲೈನ್‌ ಪ್ರದೇಶದಲ್ಲಿ ವಾಸವಾಗಿದ್ದ ಆಟೋ ಚಾಲಕ ವಿಜಯ್‌ ಕುಮಾರ್ ಮತ್ತು ಪ್ರಿಯಾ ದಂಪತಿಯ ಮೊದಲನೇ ಪುತ್ರ ಈತ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಗನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X