ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಅಕ್ರಮವಾಗಿ ನುಗ್ಗಿದ ಕಾನೂನು ವಿವಿ ಕುಲಪತಿ: ವಿದ್ಯಾರ್ಥಿಗಳಿಂದ ಧರಣಿ

Date:

Advertisements

ಪಂಜಾಬ್‌ನ ಪಟಿಯಾಲದಲ್ಲಿರುವ ರಾಜೀವ್ ಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಜೈಶಂಕರ್ ಅವರು ಯಾವುದೇ ಮಾಹಿತಿ ನೀಡದೆ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿ, ಅವರ ಖಾಸಗಿತನಕ್ಕೆ ಧಕ್ಕೆಯುಂಟು ಮಾಡಿರುವ ಆರೋಪ ಕೇಳಿಬಂದಿದೆ.

ಕ್ಯಾಂಪಸ್‌ನಲ್ಲಿರುವ ವಿಸಿ ನಿವಾಸದ ಹೊರಗೆ ನೂರಾರು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ಕುಲಪತಿಯಾಗಿರುವ ಪ್ರೊಫೆಸರ್ ಜೈಶಂಕರ್ ಅವರು ಯಾವುದೇ ಪೂರ್ವ ಸೂಚನೆ ಅಥವಾ ಒಪ್ಪಿಗೆ ಇಲ್ಲದೆ ಭಾನುವಾರ ಮಧ್ಯಾಹ್ನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿರುವ ಕೊಠಡಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಯರ ಬಟ್ಟೆಗಳನ್ನು ನೋಡಿ ಅವಾಚ್ಯವಾಗಿ ನಿಂದಿಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ತಮ್ಮ ಹಾಸ್ಟೆಲ್‌ನ ಒಳಗೆ ಪ್ರವೇಶಿಸುವ ಮೂಲಕ ಖಾಸಗಿತನವನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ, ಕೂಡಲೇ ಅವರನ್ನು ಕುಲಪತಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಭಾನುವಾರ ಸಂಜೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisements

“ಕುಲಪತಿ ಜೈಶಂಕರ್ ಅವರು ಹಾಸ್ಟೆಲ್‌ಗೆ ಭೇಟಿ ನೀಡುವ ಬಗ್ಗೆ ಯಾವುದೇ ಮಾಹಿತಿ ನಮಗೆ ಇರಲಿಲ್ಲ. ಅಕ್ರಮವಾಗಿ ಪ್ರವೇಶಿಸಿದ್ದೂ ಅಲ್ಲದೇ, ಅವರು ನಮ್ಮ ಡ್ರೆಸ್ಸಿಂಗ್ ಸೆನ್ಸ್ ಅನ್ನು ಪ್ರಶ್ನಿಸಿದ್ದಾರೆ. ಗೌಪ್ಯತೆಯನ್ನು ಉಲ್ಲಂಘಿಸಿದ್ದಾರೆ” ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ಕುಲಪತಿಯ ನಡೆಯ ವಿವರ ತಿಳಿದ ಕಾನೂನು ವಿವಿಯ ವಿದ್ಯಾರ್ಥಿಗಳೂ ಕೂಡ ಪ್ರತಿಭಟನೆಗೆ ಕೈ ಜೋಡಿಸಿದ್ದು, ನಿವಾಸದ ಹೊರಗೆ ಧರಣಿ ಕುಳಿತಿದ್ದಾರೆ. ಅಲ್ಲದೇ, ‘NOT YOUR DAUGHTER, JAI SHANKAR JAO ಎಂಬಿತ್ಯಾದಿ ಪ್ಲೆಕಾರ್ಡ್‌ಗಳನ್ನು ಕೂಡ ಇಟ್ಟುಕೊಂಡು, ಪ್ರತಿಭಟನೆ ನಡೆಸುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X