ಗುಬ್ಬಿ | ಸಂಸ್ಕೃತದಲ್ಲಿ ಕನ್ನಡ ಪದ ನಮ್ಮ ಹೆಮ್ಮೆ : ಆನಂದ್

Date:

Advertisements

ಸಂಸ್ಕೃತ ಭಾಷೆಯ ಸುಮಾರು 60 ಕ್ಕೂ ಹೆಚ್ಚು ಪದಗಳು ಪ್ರಸ್ತುತ ಕನ್ನಡ ಭಾಷೆಯಲ್ಲಿ ಇರುವುದು ವಿಶೇಷ ಹೆಮ್ಮೆ ಎನಿಸಿದೆ ಎಂದು ಎಸ್ ಡಿಎಂಸಿ ಅಧ್ಯಕ್ಷ ಆನಂದ್ ತಿಳಿಸಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಕನ್ನಡ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ವಿಭಾಗ ಹಾಗೂ ಭಾರತಿ ಸಂಸ್ಕೃತ ವಿದ್ಯಾಲಯ ವತಿಯಿಂದ ಆಯೋಜಿಸಲಾಗಿದೆ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷ ಅರ್ಥವನ್ನು ನೀಡುವ ಸಂಸ್ಕೃತ ಭಾಷೆಯ ಕಲಿಕೆಯು ಎಲ್ಲಾ ಮಕ್ಕಳಿಗೂ ಅನಿವಾರ್ಯವಾಗಿ ಬೇಕಾಗಿದೆ ಈ ನಿಟ್ಟಿನಲ್ಲಿ ಸಂಸ್ಕೃತ ಭಾಷೆಯ ಪರಿಚಯವನ್ನು ಪ್ರತಿಯೊಬ್ಬರು ತಿಳಿಯಬೇಕಿದೆ ಎಂದರು.

ಬೆಟ್ಟದಹಳ್ಳಿ ಮಠದ ಸಂಸ್ಕೃತಿ ಭಾಷೆಯ ಮುಖ್ಯ ಶಿಕ್ಷಕ ಸಿ.ಎಂ.ಭೋಜಯ್ಯ ಮಾತನಾಡಿ, ಭಾರತದ ಪ್ರಾಚೀನ ಕಾಲದಲ್ಲಿ ಗುರುಕುಲ ಪದ್ಧತಿಯಲ್ಲಿ ಮಕ್ಕಳಿಗೆ ಸಂಸ್ಕೃತಿ ಭಾಷೆಯ ಪಾಠವನ್ನು ಕಲಿಸಲಾಗುತ್ತಿತ್ತು. ಆಗಿನ ಸಂದರ್ಭದಲ್ಲಿ ಸಂಸ್ಕೃತ ಭಾಷೆಯನ್ನು ಸಂವಹನ ಭಾಷೆಯಾಗಿ ಬಳಕೆ ಮಾಡುತ್ತಿದ್ದರಿಂದ ಹೆಚ್ಚು ಮನ್ನಣೆಯನ್ನು ಗಳಿಸಿತ್ತು. ಇಂದಿಗೂ ಸಹ ಸಂಸ್ಕೃತಿ ಭಾಷೆಯು ವೈಜ್ಞಾನಿಕ ಭಾಷೆಯ ಸ್ಥಾನವನ್ನು ಪಡೆದಿದ್ದು ದೇಶದ ಹಿರಿಮೆ ಗರಿಮೆಯನ್ನು ಎತ್ತಿ ಹಿಡಿದ ಸಂಸ್ಕೃತ ಭಾಷೆಯು ನಮ್ಮ ಭಾರತದ ಹೆಮ್ಮೆಯ ಭಾಷೆಯಾಗಿದೆ ಎಂದ ಅವರು ಪ್ರಸ್ತುತ ಇರುವ ಎಲ್ಲಾ ಭಾಷೆಗಳಿಗೆ ಮೂಲ ಭಾಷೆಯಾಗಿ ತಾಯಿ ಭಾಷೆಯಾಗಿದೆ ಹಾಗೂ ಮಾನವನ ಸರ್ವಾಂಗಿನ ಅಭಿವೃದ್ಧಿಗೆ ಸಂಸ್ಕೃತ ಭಾಷೆಯು ಮೂಲವಾಗಿದೆ ಎಂದು ತಿಳಿಸಿದರು.

Advertisements

ಕಾರ್ಯಕ್ರಮದಲ್ಲಿ ಸಿಆರ್ ಪಿ ನಾಗಭೂಷಣ್, ಮುಖ್ಯ ಶಿಕ್ಷಕಿ ಮಂಜುಳಾ, ಸಹ ಶಿಕ್ಷಕರಾದ ಸುಮಿತ್ರಾ , ಶೋಭಾ, ನಟರಾಜು, ಪುರುಷೋತ್ತಮ್, ಸಂಸ್ಕೃತ ಶಿಕ್ಷಕರಾದ ರಘುನಾಥ್, ಕವನ, ಕುಮಾರ್, ಭಾರತಿ ಸಂಸ್ಕೃತ ವಿದ್ಯಾಲಯ ಸಂಸ್ಥೆಯ ಕಾರ್ಯದರ್ಶಿ ರಾಜಮ್ಮ, ಸಹ ಶಿಕ್ಷಕರಾದ ಕೆಂಪರಾಜು, ನಂದಿನಿ, ಭಾಗ್ಯಮ್ಮ, ಪೋಷಕರು ಎಸ್ ಡಿ ಎಂ ಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X