ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ; 180 ದೇಶಗಳ ಪೈಕಿ ಭಾರತಕ್ಕೆ 161ನೇ ಸ್ಥಾನ!

Date:

Advertisements
  • ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಬಿಡುಗಡೆ
  • ‘ರಿಪೋರ್ಟರ್ಸ್ ವಿದೌಟ್‌ ಬಾರ್ಡರ್ಸ್‌’ ಸಂಸ್ಥೆಯಿಂದ ಪ್ರಕಟ

‘ರಿಪೋರ್ಟರ್ಸ್ ವಿದೌಟ್‌ ಬಾರ್ಡರ್ಸ್‌’ ಸಂಸ್ಥೆ ಪ್ರಕಟಿಸಿರುವ ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಆಘಾತಕಾರಿ ಅಂಕಿ- ಅಂಶವನ್ನು ಬಹಿರಂಗಪಡಿಸಿದೆ. ಈ ಸೂಚ್ಯಂಕದಲ್ಲಿ ಭಾರತ 161ನೇ ಸ್ಥಾನಕ್ಕೆ ಕುಸಿದಿದೆ.

ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಪಟ್ಟಿಯಲ್ಲಿ ಕಳೆದ ಬಾರಿಗಿಂತ 11 ಸ್ಥಾನಗಳ ಕುಸಿತ ಕಂಡಿರುವ ಭಾರತ, ನೆರೆಯ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕಿಂತ ಕೆಳಗಿನ ಶ್ರೇಯಾಂಕ ಪಡೆದಿದೆ.

180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಕಳೆದ ಬಾರಿ 150ನೇ ಮತ್ತು ಅದಕ್ಕೂ ಮೊದಲಿನ ಪಟ್ಟಿಯಲ್ಲಿ 142ನೇ  ಸ್ಥಾನದಲ್ಲಿತ್ತು. ಆ ಮೂಲಕ ದೇಶದಲ್ಲಿ ಪತ್ರಕರ್ತರು ಅತಿ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂಬುದು ಬಹಿರಂಗವಾಗಿದೆ.

Advertisements

ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ (95), ಪಾಕಿಸ್ತಾನ (150), ಅಫ್ಘಾನಿಸ್ತಾನ (152), ಶ್ರೀಲಂಕಾ 135ನೇ ಶ್ರೇಯಾಂಕ ಹೊಂದಿದೆ.  ಬಾಂಗ್ಲಾದೇಶ 163ನೇ ಮತ್ತು ಚೀನಾ 179ನೇ ಸ್ಥಾನದಲ್ಲಿದೆ ಎಂದು ಸಂಸ್ಥೆಯು ಮಂಗಳವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ ನಾರ್ವೆ, ಐರ್ಲೆಂಡ್ ಮತ್ತು ಡೆನ್ಮಾರ್ಕ್ ಉತ್ತಮ ಪತ್ರಿಕಾ ಸ್ವಾತಂತ್ರ್ಯ ಹೊಂದಿರುವ ಮೊದಲ ಮೂರು ರಾಷ್ಟ್ರಗಳಾಗಿವೆ.

ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಹಾಗೂ ಭದ್ರತೆ ಸೇರಿದಂತೆ ಐದು ಅಂಶಗಳ ಆಧಾರದ ಮೇಲೆ ‘ರಿಪೋರ್ಟರ್ಸ್ ವಿದೌಟ್‌ ಬಾರ್ಡರ್ಸ್‌’ ಸಂಸ್ಥೆ ಪತ್ರಿಕಾ ಸ್ವಾತಂತ್ರ್ಯ ಸಂಬಂಧಿಸಿ ಮೌಲ್ಯಮಾಪನ ಮಾಡುತ್ತದೆ.

ಈ ಎಲ್ಲಾ ಐದು ಅಂಶಗಳಲ್ಲಿ ಭಾರತದ ಪರಿಸ್ಥಿತಿಯು ವರ್ಷದಿಂದ ವರ್ಷಕ್ಕೆ ಹದಗೆಡುತ್ತಿದೆ ಎಂದು ವರದಿ ಹೇಳಿದೆ. ರಾಜಕೀಯ ಅಂಶ 145 ರಿಂದ 169 ಮತ್ತು ಶಾಸಕಾಂಗ ಅಂಶ 120 ರಿಂದ 144 ಅಂದರೆ ಒಟ್ಟು 24 ಸ್ಥಾನಗಳಲ್ಲಿ ಕುಸಿತ ಕಂಡಿದೆ.

ಈ ಸುದ್ದಿ ಓದಿದ್ದೀರಾ?: ದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

2023ರ ಜನವರಿಯಿಂದ ಏಪ್ರಿಲ್‌ ತಿಂಗಳ ಅಂತ್ಯದ ಅವಧಿಯಲ್ಲಿ ಭಾರತದಲ್ಲಿ ಓರ್ವ ಪತ್ರಕರ್ತನ ಕೊಲೆಯಾಗಿದ್ದು, 10 ಮಂದಿ ಬಂಧನಕ್ಕೊಳಗಾಗಿದ್ದಾರೆ ಎಂದು ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X