ಮಂಡ್ಯ | ಪ್ರವಾದಿ ಮಹಮ್ಮದ್ ಲೇಖನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ನಿರ್ಮಲಾನಂದ ಸ್ವಾಮೀಜಿ

Date:

Advertisements

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸೀರತ್ ಅಭಿಯಾನದ ಪ್ರಯುಕ್ತ ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ ಪುಸ್ತಕವನ್ನು ನಿರ್ಮಲಾನಂದ ಸ್ವಾಮೀಜಿಯವರು ಬಿಡುಗಡೆಗೊಳಿಸಿ, ವಿಚಾರ-ವಿನಿಮಯ ನಡೆಸಿದರು.

ದೇಶದಾದ್ಯಂತ ನೂರಾರು ಕಡೆಗಳಲ್ಲಿ ವ್ಯಾಪಿಸಿರುವ ಆದಿಚುಂಚನಗಿರಿ ಶಾಖಾ ಮಠಗಳ ಮೂಲ ಮಠದಲ್ಲಿ ಸೀರತ್ ಅಭಿಯಾನದ ಕೊನೆಯ ದಿನದ ಭಾಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯ ಸ್ಥಾನೀಯ ಘಟಕದಿಂದ ಮಠದ ಸ್ವಾಮೀಜಿ ನಿರ್ಮಲಾನಂದ ಸ್ವಾಮೀಜಿಯವರನ್ನು ಸಂದರ್ಶಿಸಲಾಯಿತು.

ಸೀರತ್ ಅಭಿಯಾನ ಪ್ರಯುಕ್ತ ಶಾಂತಿ ಪ್ರಕಾಶನ ಹೊರತಂದಿರುವ “ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ” ಪುಸ್ತಕವನ್ನು ನೀಡಿ ಮಾಹಿತಿ ನೀಡಲಾಯಿತು. ಬಳಿಕ ಸ್ವಾಮೀಜಿಯವರು ಪುಸ್ತಕ ಬಿಡುಗಡೆ ಮಾಡಿ ಶುಭ ಹಾರೈಸಿದರು.

Advertisements

ವಿವಿಧ ಪ್ರವಾದಿಗಳ ಬಗ್ಗೆ ಹಾಗೂ ವಿಶೇಷವಾಗಿ ಪ್ರವಾದಿ ಮುಹಮ್ಮದ್(ಸ)ರ ಕುರಿತು ಸುಮಾರು ಅರ್ಧ ಗಂಟೆಗಳ ಕಾಲ ತಮ್ಮ ಪೀಠದಲ್ಲಿ ಕುಳಿತುಕೊಂಡು ಸಂದರ್ಶಕರ ಸಮ್ಮುಖದಲ್ಲಿ ವಿಚಾರ ವಿನಿಮಯ ನಡೆಸಿದರು.

ಇದನ್ನು ಓದಿದ್ದೀರಾ? ಮಂಡ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ: ಬಡ ಮಹಿಳೆಯರ ಬದುಕಿಗೆ ಬೆಂಕಿ

ಜಮಾಅತ್ ತಂಡದಲ್ಲಿ ಮೈಸೂರು ವಲಯ ಸಂಚಾಲಕ ಅಬ್ದುಸ್ಸಲಾಂ ಉಪ್ಪಿನಂಗಡಿ, ಮೈಸೂರು ಸ್ಥಾನೀಯ ಉಪಾಧ್ಯಕ್ಷ ಅಸಾದುಲ್ಲಾ, ಸದಸ್ಯರಾದ ಅಬ್ದುಲ್ ವಾಹಿದ್ ಅಲಿ, ಫಯಾಝ್ ಮಲಿಕ್ ಹಾಗೂ ಪತ್ರಕರ್ತ ಮೋಹನ್ ಮೈಸೂರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X