ಭಾನುವಾರ ಬೆಂಗಳೂರಲ್ಲಿ ದಿಗ್ಗಜರ ರೋಡ್ ಶೋ: ರಾಹುಲ್ – ಮೋದಿ ಮುಖಾಮುಖಿ

Date:

Advertisements
  • ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ
  • ಒಂದೇ ದಿನ ಇಬ್ಬರು ನಾಯಕರ ರೋಡ್‌ ಶೋ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಆರು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ, ಕುತೂಹಲಕಾರಿ ಬೆಳವಣಿಗೆಯೊಂದಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಸಾಕ್ಷಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದೇ ದಿನ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿಗರು ಭಾನುವಾರ ದೆಹಲಿಯ ಇಬ್ಬರು ನಾಯಕರ ರ್‍ಯಾಲಿಗೆ ಸಾಕ್ಷಿಯಾಗಲಿದ್ದಾರೆ.

ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಶನಿವಾರ ಸಂಜೆ ರೋಡ್‌ ಶೋ ಹಮ್ಮಿಕೊಂಡಿದ್ದರು. ರಾಹುಲ್ ಗಾಂಧಿ ಭಾನುವಾರ ರ್‍ಯಾಲಿ ಹಮ್ಮಿಕೊಂಡಿದ್ದರು. ಆದರೆ, ಮೋದಿಯವರು ತಮ್ಮ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದು, ಶನಿವಾರ ಮತ್ತು ಭಾನುವಾರ ಮುಂಜಾನೆ ಬೆಂಗಳೂರಿಗರತ್ತ ಕೈಬೀಸಲಿದ್ದಾರೆ.

Advertisements

ಮೋದಿಯವರ ಮೇ 6ರ ಪ್ರಚಾರಕ್ಕೆ ಸೆಡ್ಡು ಹೊಡೆಯಲು ಸಜ್ಜಾಗಿದ್ದ ಕಾಂಗ್ರೆಸ್ ಪ್ರಚಾರದ ಅಖಾಡಕ್ಕೆ ರಾಹುಲ್ ಗಾಂಧಿ ಅವರನ್ನು ಇಳಿಸಿತ್ತು. ಮೋದಿ ಅವರ ಕಾರ್ಯಕ್ರಮದ ಬದಲಾವಣೆಯಿಂದ ಮೋದಿ ಅವರ ಪ್ರಚಾರದ ದಿನವೇ ರಾಹುಲ್ ಗಾಂಧಿ ರೋಡ್‌ ಶೋ ನಡೆಸಲಿದ್ದಾರೆ.

ಈಗಾಗಲೇ ಮೋದಿ ಅವರ ರೋಡ್‌ ಶೋಗಳಿಂದ ಉಂಟಾಗುತ್ತಿರುವ ವಾಹನ ದಟ್ಟಣೆಗೆ ಬೆಂಗಳೂರಿನ ನಾಗರಿಕರು ಹೈರಾಣಾಗಿದ್ದಾರೆ. ಇದರ ನಡುವೆಯೇ ಮೋದಿ ಎರಡು ದಿನಗಳ ಕಾಲ ರೋಡ್‌ ಶೋ ನಡೆಸಲಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ.

ರಾಜ್ಯ ವಿಧಾನಸಭಾ ಅಖಾಡ ರಂಗೇರುತ್ತಿರುವ ನಡುವೆ ದೆಹಲಿಯ ಇಬ್ಬರು ದಿಗ್ಗಜರು ಒಂದೇ ದಿನ ರೋಡ್ ಶೋ ನಡೆಸುತ್ತಿದ್ದು, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಶನಿವಾರವಷ್ಟೇ ಇದ್ದ ಮೋದಿ ಅವರ ರೋಡ್‌ ಶೋ ಎರಡನೇ ದಿನಕ್ಕೆ ವಿಸ್ತರಿಸಿದ್ದು, ರಾಹುಲ್ ಗಾಂಧಿ ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ಆಗುವ ಲಾಭಕ್ಕೆ ಕಡಿವಾಣ ಹಾಕಲು ಬಿಜೆಪಿ ಇಂತಹದೊಂದು ತಂತ್ರ ಹೂಡಿದೆ ಎನ್ನಲಾಗಿದೆ. ಬೆಂಗಳೂರಿನ ಗಮನ ಕೇಂದ್ರಿಕರಿಸಲು ಮೋದಿ ಎರಡು ದಿನ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯನವರ ವರುಣದಲ್ಲಿ ಕಂಡ ಮುಖಗಳು

ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ರಾಜ್ಯದಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರು ಸಹ ರಾಜ್ಯ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಲು ಶ್ರಮಿಸುತ್ತಿದ್ದಾರೆ.

ಮೇ 6ರಂದು ಸೋನಿಯಾ ಗಾಂಧಿ ರೋಡ್ ಶೋ

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಚುನಾವಣಾ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪರವಾಗಿ ಮತಭೇಟೆಗೆ ಮಂದಾಗಿದ್ದಾರೆ.

ಸೋನಿಯಾ ಗಾಂಧಿ ಮೇ 6ರಂದು ಹುಬ್ಬಳ್ಳಿಯಲ್ಲಿ ಬೃಹತ್ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲ ಬಾರಿಗೆ ಸೋನಿಯಾ ಗಾಂಧಿ ಪ್ರಚಾರ ನಡೆಸುತ್ತಿದ್ದು, ಹುಬ್ಬಳ್ಳಿಯಲ್ಲಿ ಭಾರೀ ಜನ ಸೇರುವ ನಿರೀಕ್ಷೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X