ಕಮಲನಗರ | ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

Date:

Advertisements

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಖೇರ್ಡಾನಿಂದ ಚಿಕ್ಲಿ(ಯು) ಮಹಾರಾಷ್ಟ್ರ ಬಾರ್ಡರ್‌ವರೆಗೆ ನಿರ್ಮಿಸಲಾಗುತ್ತಿರುವ 8.5 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಮಾಜಿ ಸಚಿವ, ಔರಾದ್ ಶಾಸಕ ಪ್ರಭು.ಬಿ ಚವ್ಹಾಣ ಸೋಮವಾರ ದಾಬಕಾ(ಸಿ) ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ʼಕೆಲಸ ಗುಣಮಟ್ಟದಿಂದ ಆಗಬೇಕು ಮತ್ತು ನಿಗದಿತ ಅವಧಿಯೊಳಗೆ ಮುಗಿಸಬೇಕು. ಅಂದಾಜು ಪಟ್ಟಿಯಲ್ಲಿ ಇರುವಂತೆ ಕೆಲಸ ಅಚ್ಚುಕಟ್ಟಾಗಿ ಆಗಬೇಕು. ಮುಂದಿನ ದಿನಗಳಲ್ಲಿ ರಸ್ತೆ ಬಗ್ಗೆ ಜನರಿಂದ ದೂರುಗಳು ಬಾರದಂತೆ ಕಾಮಗಾರಿ ನಡೆಸಬೇಕುʼ ಎಂದು ಶಾಸಕರು ಗುತ್ತಿಗೆದಾರ ಜಗದೀಶ ಖೂಬಾ ಅವರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಕಟ್ಟುನಿಟ್ಟಿನ ಸೂಚಿಸಿದರು.

ನಾನು ಶಾಸಕನಾದ ನಂತರ ಈ ರಸ್ತೆ ಎಂದೂ ಕೆಟ್ಟಿರಲಿಲ್ಲ. ಗುತ್ತಿಗೆದಾರರ ಕಾರಣದಿಂದಾಗಿ ಈ ರಸ್ತೆ ಸಾಕಷ್ಟು ಹದಗೆಟ್ಟು ಹೋದ ಕಾರಣ ಈ ಭಾಗದ ಜನರು ಒಂದುವರೆ ವರ್ಷ ಕಾಲ ಸಂಕಷ್ಟ ಎದುರಿಸಿರುವುದಕ್ಕೆ ನೋವಾಗಿದೆ. ಚುನಾವಣಾ ಪೂರ್ವದಲ್ಲಿಯೇ ಆರಂಭಿಸಿ ರಸ್ತೆಯನ್ನೆಲ್ಲ ಅಗೆದು ಏಕಾಏಕಿ ನಿಲ್ಲಿಸಿದ್ದರಿಂದ ಓಡಾಡಲು ಸಂಕಷ್ಟ ಅನುಭವಿಸಿದ್ದಾರೆ. ಹೆರಿಗೆಗಾಗಿ ಹೋಗಬೇಕಾದರೆ ಸಂಕಷ್ಟವಾಗುತ್ತಿದೆ ಎಂದು ಮಹಿಳೆಯರು ನೋವು ಹಂಚಿಕೊಂಡಿದ್ದನ್ನು ನೆನೆಸಿಕೊಂಡರೆ ಮೈ ನಡುಗುತ್ತದೆ ಎಂದು ಜನತೆ ಅನುಭವಿಸಿದ ಸಂಕಷ್ಟಗಳನ್ನು ಹಂಚಿಕೊಂಡರು.

Advertisements

ʼರಸ್ತೆ ಅಪೂರ್ಣಗೊಳಿಸಿದ್ದರಿಂದ ಜನತೆ ಪ್ರತಿದಿನ ಹತ್ತಾರು ಕರೆಗಳನ್ನು ಮಾಡುವಂತಾಗಿದೆ. ಮುಂದೆ ಹೀಗಾಗಬಾರದು. ರಸ್ತೆ ಪೂರ್ಣಗೊಳಿಸುವರೆಗೆ ನಿಲ್ಲಿಸಬಾರದು. ಹಿಂದಿನಂತೆ ಮಾಡಿದರೆ ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ. ಗ್ರಾಮಸ್ಥರು ಕೂಡ ತಮ್ಮ ಊರಿನ ರಸ್ತೆ ಕೆಲಸ ಸರಿಯಾಗಿ ಆಗುವಂತೆ ಮುತುವರ್ಜಿ ವಹಿಸಬೇಕು. ಎಲ್ಲಿಯಾದರೂ ಕೆಲಸ ಕಳಪೆಯಾಗುತ್ತಿರುವುದು ಕಂಡುಬಂದರೆ ತಮ್ಮನ್ನು ಅಥವಾ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಸರಿಪಡಿಸಿಕೊಳ್ಳಬೇಕು. ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವೆʼ ಎಂದು ಭರವಸೆ ನೀಡಿದರು.

ಈ ಬಗ್ಗೆ ಈದಿನ.ಕಾಮ್‌ ನಲ್ಲಿ ಜುಲೈ 28ರಂದು ʼಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?ʼ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಕ್ಷೇತ್ರದ ಶಾಸಕರು ಇದೀಗ ನನೆಗುದಿಗೆ ಬಿದ್ದ ಅಪೂರ್ಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಇದೇ ವೇಳೆ ಶಾಸಕರು 65 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ (ಸಿಡಿ) ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕತ್ತಲೆಯಲ್ಲಿ ಜಿಲ್ಲಾ ಉದ್ಯೋಗ ವಿನೀಮಯ ಕಚೇರಿ; ಸಿಬ್ಬಂದಿ ಪರದಾಟ

ಈ ಸಂದರ್ಭದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಪ್ರತೀಕ್ ಚವ್ಹಾಣ, ಸತೀಷ ಪಾಟೀಲ, ಯೋಗೇಶ ಪಾಟೀಲ, ರಾಜು ಶೆಳ್ಕೆ, ಸಂಜು ಮುರ್ಕೆ, ಜಾಕೀರ್ ಶೇಕ್, ಕುಶಾಲ ನಾಯಕ್, ಧನಾಜಿ ಬಿರಾದಾರ, ವಸಂತ ಶಿಂಧೆ, ಹನುಮಂತ ನಾಯಕ್, ಸುಜಿತ ರಾಠೋಡ, ಶುಭಂ ಪಾಟೀಲ್, ಗ್ಯಾನೋಬಾ ಪಾಟೀಲ, ಅಂಕುಶ ವಾಡೇಕರ್, ಭಾನುದಾಸ ಜಾಧವ್ ಸೇರಿದಂತೆ ಗ್ರಾಮ ಪಂಚಾಯಿತಿಗಳ ಅಧ್ತಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X