ಕರ್ನಾಟಕ ಚುನಾವಣೆ ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟ: ಪೃಥ್ವಿ ರೆಡ್ಡಿ

Date:

Advertisements
  • ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತದ ಸಲುವಾಗಿ ಅಕ್ರಮಗಳಿಗೆ ಕಡಿವಾಣ ಹಾಕಿ
  • ಜನಸಾಮಾನ್ಯರು ಚುನಾವಣೆಗೆ ಸ್ಪರ್ಧಿಸುವುದಷ್ಟೇ ಅಲ್ಲ, ಗೆಲ್ಲಲು ಕೂಡ ಸಾಧ್ಯವಿದೆ

ಆಮ್‌ ಆದ್ಮಿ ಪಕ್ಷವು (ಎಎಪಿ) ದೆಹಲಿ ಹಾಗೂ ಪಂಜಾಬ್‌ನಲ್ಲಿ ಜಾರಿಗೆ ತಂದಿರುವ ಯೋಜನೆಗಳನ್ನು ಬೇರೆ ಪಕ್ಷಗಳು ನಕಲು ಮಾಡಿ ಕರ್ನಾಟಕದಲ್ಲಿ ಆಶ್ವಾಸನೆ ನೀಡುತ್ತಿವೆ. ಈ ಚುನಾವಣೆಯು ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನವರು ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ ಅವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮಾಧ್ಯಮಗಳ ಜೊತೆ ಸಂವಾದ ನಡೆಸುವುದು ಒಳ್ಳೆಯ ಬೆಳವಣಿಗೆ. ಆಮ್‌ ಆದ್ಮಿ ಪಕ್ಷವು ಇಡೀ ದೇಶದ ರಾಜಕೀಯದಲ್ಲಿ ಬದಲಾವಣೆ ತಂದಿದೆ. ಜನಪರ ಆಡಳಿತವನ್ನು ಜನರು ಬಯಸಲು ಶುರು ಮಾಡಿದ್ದು, ಚುನಾವಣೆಯಲ್ಲಿ ʻಮತದಾನ ಮಾಡುವುದರಿಂದ ನಮಗೇನು ಲಾಭವಾಗುತ್ತದೆ?ʼ ಎಂದು ಯೋಚಿಸಲು ಆರಂಭಿಸಿದ್ದಾರೆ” ಎಂದು ಹೇಳಿದರು.

“ಎಎಪಿ ಕೇವಲ ಹತ್ತು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಧಿಕಾರ ಹೊಂದಿರುವ ಕೇವಲ ಮೂರು ಪಕ್ಷಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಕೂಡ ಒಂದು. ಜನಸಾಮಾನ್ಯರು ಚುನಾವಣೆಗೆ ಸ್ಪರ್ಧಿಸುವುದಷ್ಟೇ ಅಲ್ಲ, ಗೆಲ್ಲಲು ಕೂಡ ಸಾಧ್ಯವಿದೆ ಎಂಬುದನ್ನು ಆಮ್‌ ಆದ್ಮಿ ಪಾರ್ಟಿ ಸಾಬೀತು ಪಡಿಸಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಗೆದ್ದರೆ ಕಟಿಂಗ್‌ ಫ್ರೀ ಎಂದ ರಾಜಾಜಿನಗರದ ಪಕ್ಷೇತರ ಅಭ್ಯರ್ಥಿ

“ಜನರ ತೆರಿಗೆ ಹಣವು ಉದ್ಯಮಿಗಳ ಸಾಲ ಮನ್ನಾ ಮಾಡಲು ಬಳಕೆಯಾಗುತ್ತಿರುವುದು ದುರದೃಷ್ಟಕರ. ಕಮಿಷನ್‌ ದಂಧೆಯಿಂದಾಗಿ ಸರ್ಕಾರಗಳಿಗೆ ಯಾವುದಕ್ಕೂ ಹಣ ಸಾಕಾಗುತ್ತಿಲ್ಲ. ಹೀಗಿರುವಾಗ ಇವರುಗಳು ನೀಡಿರುವ ಗ್ಯಾರಂಟಿ, ಭರವಸೆಗಳು ಎಷ್ಟರಮಟ್ಟಿಗೆ ಈಡೇರುತ್ತವೆ ಎಂಬುದು ಮತದಾರರುಗಳಲ್ಲಿ ಯಕ್ಷ ಪ್ರಶ್ನೆಯಾಗಿದೆ. ಅಕ್ರಮಗಳಿಗೆ ಕಡಿವಾಣ ಹಾಕಿ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವನ್ನು ನೀಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ  ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಅನೇಕ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X