ಮುಡಾ ಹಗರಣ | ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Date:

Advertisements

ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಪ್ರತಿಭಟಿಸಿ ಒತ್ತಾಯ ಮಾಡಿತು.

ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

“ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನ ಪ್ರತಿನಿಧಿ ನ್ಯಾಯಾಲಯ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸಿ, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ರಮೇಶ್ ಗೌಡ ಆಗ್ರಹಿಸಿದರು.

Advertisements

“ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು; ಅವರು ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು, ಮುಖ್ಯಮಂತ್ರಿ ಮನೆಗೆ ಯುವ ಮೋರ್ಚಾ ಮುತ್ತಿಗೆ

ಅಧಿಕಾರ ದುರ್ಬಳಕೆ

“ಮುಡಾದಲ್ಲಿ ನಿವೇಶನಗಳನ್ನು ಕಬಳಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ನ್ಯಾಯಾಲಯಗಳ ಆದೇಶ ಕೂಡ ಸ್ಪಷ್ಟವಾಗಿದೆ. ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಒಂದು ಕ್ಷಣವೂ ಅವರು ಅಧಿಕಾರದಲ್ಲಿ ಮುಂದುವರಿಬಾರದು” ಎಂದರು.

“ತಮ್ಮ ಪತ್ನಿ ಅವರಿಗೆ ಅನುಕೂಲ ಆಗುವಂತೆ ನಿರ್ಧಾರ ತೆಗೆದುಕೊಳ್ಳುವ ಪ್ರತಿ ಸಲವೂ ಸಿದ್ದರಾಮಯ್ಯ ಅವರು ಪ್ರಭಾವಿ ಹುದ್ದೆಯಲ್ಲಿ ಇದ್ದರು. ಈ ಪ್ರಭಾವದಿಂದ ಅವರು ತಮ್ಮ ಪತ್ನಿ ಅವರಿಗೆ ಕೇವಲ ಎರಡು ನಿವೇಶನಗಳು ದೊರೆಯುಬೇಕಿದ್ದ ಬದಲಿಗೆ 14 ನಿವೇಶನಗಳು ಸಿಕ್ಕಿವೆ. ಇದನ್ನೇ ನ್ಯಾಯಾಲಯ ಗಮನಿಸಿದೆ” ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಕೆ ಎನ್ ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಜೆಡಿಎಸ್ ನಗರ ಘಟಕದ ಅನೇಕ ಪದಾಧಿಕಾರಿಗಳು, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ಇತರೆ ಮುಖಂಡರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X