ಮಹಾಲಕ್ಷ್ಮೀ ಕೊಲೆ ಪ್ರಕರಣ | ಶಂಕಿತ ಆರೋಪಿ ಮುಕ್ತಿರಂಜನ್ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

Date:

Advertisements

ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಪ್ರಧಾನ ಶಂಕಿತ ಆರೋಪಿ ಮುಕ್ತಿರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ 29 ವರ್ಷದ ಯುವತಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ತುಂಬಲಾಗಿತ್ತು. ಈ ಕೃತ್ಯ ಎಸಗಿ ಊರಿಗೆ ಪರಾರಿಯಾಗಿದ್ದ ಶಂಕಿತ ಆರೋಪಿ ಒಡಿಶಾದ ಭದ್ರಕ್ ಪಟ್ಟಣದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಸೆಪ್ಟೆಂಬರ್ 21ರಂದು 29 ವರ್ಷದ ಮಹಾಲಕ್ಷ್ಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ಮುಕ್ತಿ ರಂಜನ್ ರಾಯ್ (30) ಎಂಬಾತನನ್ನು ಬಂಧಿಸಲು ಕರ್ನಾಟಕ ಪೊಲೀಸರು ಒಡಿಶಾದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ಯುವತಿ ಮಹಾಲಕ್ಷ್ಮೀ ಕೊಲೆ ಪ್ರಕರಣ: ಆರೋಪಿಯ ಮಾಹಿತಿ ಲಭ್ಯ ಎಂದ ಕಮಿಷನರ್

ಇನ್ನು ಡೆತ್‌ನೋಟ್‌ ಕೂಡಾ ಪತ್ತೆಯಾಗಿದೆ ಎನ್ನಲಾಗಿದೆ. ಈ ಕೊಲೆಯನ್ನು ತಾನೇ ಮಾಡಿರುವುದಾಗಿ ಆರೋಪಿ ಮುಕ್ತಿ ರಂಜನ್ ರಾಯ್ ತಪ್ಪೊಪ್ಪಿಕೊಂಡಿರುವ ಡೆತ್‌ನೋಟ್ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಬಗ್ಗೆ ಟೈಮ್ಸ್‌ ಆಫ್‌ ಇಂಡಿಯಾಗೆ ಪ್ರತಿಕ್ರಿಯೆ ನೀಡಿದ ಭದ್ರಕ್ ಎಸ್‌ಪಿ ವರುಣ್ ಗುಂಟುಪಲ್ಲಿ, “ಬೆಂಗಳೂರಿನ ಕೊಲೆಗೆ ಸಂಬಂಧಿಸಿದಂತೆ ಬಂಧನಕ್ಕೆ ಹೆದರಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಬೆಂಗಳೂರು ಪೊಲೀಸರು ಕಳೆದ ಮೂರು ದಿನಗಳಿಂದ ಭದ್ರಕ್ ಮತ್ತು ಬಾಲಸೋರ್ ಜಿಲ್ಲೆಗಳಲ್ಲಿ ಶಂಕಿತ ಆರೋಪಿಯ ಶೋಧ ನಡೆಸುತ್ತಿದ್ದರು. ನಾವು ಅವರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ವರದಿ ಪ್ರಕಾರ ಮುಕ್ತಿ ರಂಜನ್ ರಾಯ್ ಧುಸುರಿ ಪ್ರದೇಶದ ನಿವಾಸಿಯಾಗಿದ್ದು, ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ಸೆಪ್ಟೆಂಬರ್ 24ರಂದು ಭದ್ರಕ್ ತಲುಪಿದ್ದ ಎಂದು ರಾಯ್ ಕುಟುಂಬ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X