ಗೌರಿಬಿದನೂರು| ತಾಯಿ, ಮಗನ ಗಲಾಟೆ; ತಾಯಿಯ ಕೊಲೆಯಲ್ಲಿ ಅಂತ್ಯ

Date:

Advertisements

ತಾಯಿ ಮತ್ತು ಮಗನ ನಡುವಿನ ಗಲಾಟೆ ತಾರಕಕ್ಕೇರಿದ್ದು, ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಚಂದ್ರಶೇಖರ್‌(27) ಕೊಲೆ ಮಾಡಿರುವ ಆರೋಪಿ. ರಾಮಾಂಜಿನಮ್ಮ(55) ಕೊಲೆಯಾದ ತಾಯಿ. ಚಿಕ್ಕಹೊಸಹಳ್ಳಿ ಗ್ರಾಮದ ರಾಮಾಂಜಿನಮ್ಮಗೆ ಗಂಡ ಇರಲಿಲ್ಲ. ಚಂದ್ರಶೇಖರ್‌ ಹೆಂಡತಿಯೂ ಸಹ ಕುಡುಕ ಗಂಡನನ್ನು ಸಹಿಸಲಾಗದೆ ಮನೆ ಬಿಟ್ಟುಹೋಗಿದ್ದಳು. ತಾಯಿ ಮಗನ ನಡುವೆ ನಿತ್ಯ ಜಗಳವಾಗುತ್ತಿತ್ತು. ಬೇಸತ್ತಿದ್ದ ತಾಯಿ ಮೂರು ದಿನಗಳಿಂದ ಮನೆಗೆ ಬಂದಿರಲಿಲ್ಲ.

ಬುಧವಾರ ಮನೆಗೆ ಬಂದಿದ್ದ ತಾಯಿಯೊಂದಿಗೆ ಕುಡಿದು ಬಂದಿದ್ದ ಚಂದ್ರಶೇಖರ್‌ ಜಗಳ ಶುರು ಮಾಡಿ ಕೋಲಿನಿಂದ ಹೊಡೆದಿದ್ದ. ಆನಂತರ ಕೋಪಗೊಂಡಿದ್ದ ತಾಯಿಯೂ ಸಹ ಅಲ್ಲೇ ಬಿದ್ದಿದ್ದ ಕಸಗುಡಿಸುವ ಪೊರ್ಕೆಯಿಂದ ಹೊಡೆದಿದ್ದರು. ಇದಾದ ಬಳಿಕ ಕೋಪಗೊಂಡ ಮಗ ತಾಯಿಯನ್ನು ಹೊಡೆದು, ಅಲ್ಲೇ ಬಿದ್ದಿದ್ದ ಕಲ್ಲನ್ನು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಪಘಾತ; ಆವಲಗುರ್ಕಿಯ ಮೂವರು ವಿದ್ಯಾರ್ಥಿಗಳು ಸಾವು

ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್‌ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿ ಚಂದ್ರಶೇಖರ್‌ನನ್ನು ಗೌರಿಬಿದನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X