ಅಖಿಲ ಭಾರತ ಬೆಂಬಲ ದಿನ |ಹೋರಾಟನಿರತ ಮಹಿಳಾ ಕುಸ್ತಿಪಟುಗಳೊಂದಿಗೆ ರಾಜ್ಯದ ವಿದ್ಯಾರ್ಥಿಗಳಿದ್ದೇವೆ: ಶಿಲ್ಪಾ ಬಿ ಕೆ

Date:

Advertisements

ದೆಹಲಿಯಲ್ಲಿ ಮಹಿಳಾ ಕ್ರೀಡಾಪಟುಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮೇ 3ರಂದು ದೆಹಲಿ ವಿಶ್ವವಿದ್ಯಾಲಯದ ಮುಂಭಾಗ ಎಐಡಿಎಸ್‌ಒ ಕಾರ್ಯಕರ್ತರು ಮತ್ತು ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅವರ ಮೇಲೆ ಪೊಲೀಸ್ ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೆ, ಹೋರಾಟನಿರತ ಕುಸ್ತಿಪಟುಗಳಿಗೂ ಕಿರುಕುಳ ನೀಡಿದ್ದಾರೆ. ಇದು ದೆಹಲಿ ಸರ್ಕಾರದ ಅಪ್ರಜಾತಾಂತ್ರಿಕ ಹಾಗೂ ಅತ್ಯಂತ ಕ್ರೂರ ದಾಳಿ ಎಂದು ಎಐಡಿಎಸ್‌ಒ ಕಿಡಿಕಾರಿದೆ. ದೇಶಾದ್ಯಂತ ಶುಕ್ರವಾರ ಅಖಿಲ ಭಾರತ ಬೆಂಬಲ ದಿನ ಆಚರಿಸುತ್ತಿದೆ.

ದೇಶದ ಹೆಮ್ಮೆಯ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮಗೆ ಬಿಜೆಪಿ ಸಂಸದ ಹಾಗೂ ಡಬ್ಲ್ಯೂಎಫ್‌ಐನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೋರಾಟಕ್ಕೆ ದೇಶದ ಹಲವು ಗಣ್ಯ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿ-ಯುವಜನರು ಬೆಂಬಲ ನೀಡಿದ್ದಾರೆ.

“ಹಲವು ದಿನಗಳಿಂದ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಗುರುವಾರ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರತಿಭಟನೆಯ ಸ್ಥಳಕ್ಕೆ ಹಾಸಿಗೆಗಳನ್ನು ಸಾಗಿಸುವ ಸಮಯದಲ್ಲಿ, ಒಬ್ಬ ಕುಡುಕ ಪೊಲೀಸ್ ಪೇದೆ ಮಹಿಳಾ ಕುಸ್ತಿಪಟುಗಳನ್ನು ಅಡ್ಡಗಟ್ಟಿ, ಅಸಭ್ಯವಾಗಿ ವರ್ತಿಸಿ, ಅವರನ್ನು ನಿಂದಿಸಿದ್ದಾರೆ. ಈ ನಡತೆಯನ್ನು ಪ್ರತಿರೋಧಿಸಲು ಮುನ್ನುಗ್ಗಿದ ಇತರ ಹೋರಾಟನಿರತ ಕುಸ್ತಿಪಟುಗಳ ಮೇಲೆಯೂ ಪೊಲೀಸ್ ದೌರ್ಜನ್ಯ ನಡೆಸಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ” ಎಂದು ಎಐಡಿಎಸ್‌ಒ ಆರೋಪಿಸಿದೆ.

Advertisements

“ಈ ಎಲ್ಲ ನಡೆಗಳು ಅತ್ಯಂತ ಅಪ್ರಜಾತಾಂತ್ರಿಕ ಮತ್ತು ಹೋರಾಟವನ್ನು ಹತ್ತಿಕ್ಕಲು ನಡೆಸಿರುವ ಕ್ರೂರ ಪ್ರಯತ್ನ. ತಮ್ಮ ಘನತೆ ಹಾಗೂ ಗೌರವಕ್ಕಾಗಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಅತ್ಯಂತ ನ್ಯಾಯಸಮ್ಮತವಾಗಿದೆ. ಅವರ ಮೇಲೆ ದೌರ್ಜನ್ಯ ಎಸಗಿರುವ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಬೇಕು” ಎಂದು ಸಂಘಟನೆ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

“ಡಬ್ಲ್ಯೂಎಫ್‌ಐನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಫೆಡರೇಶನ್‌ನಿಂದ ಉಚ್ಛಾಟನೆ ಮಾಡಬೇಕು. ಲೈಂಗಿಕ ಕಿರುಕುಳ ಘಟನೆಗಳಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೂ ಶಿಕ್ಷೆ ನೀಡಬೇಕು. ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಖಾತ್ರಿ ಪಡಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X