ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

Date:

Advertisements

ಆಹಾರ ಮತ್ತು ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ ಮಾತ್ರವಲ್ಲ, ಹಳಸಲು ತಂತ್ರಜ್ಞಾನ ಎನ್ನುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಕುಲಾಂತರಿ ಉಚ್ಚಾಟನೆ ಮಾಡಬೇಕು, ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಕೆ ಟಿ ಗಂಗಾಧರ್, ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ. ಬಿಟಿ ಬದನೆ ಪ್ರಕರಣದಲ್ಲಿ ನಡೆದಂತೆ ವ್ಯಾಪಕ ಮತ್ತು ಅರ್ಥಪೂರ್ಣ ಚರ್ಚೆಗಳು ಎಲ್ಲ ನಾಗರಿಕರಿಗೂ ಮುಕ್ತವಾಗಿರಬೇಕು. ಜಿಲ್ಲಾ ಮಟ್ಟದಲ್ಲಿ ಚರ್ಚೆಗಳನ್ನು ನಡೆಸಬೇಕು. ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಹಕ್ಕುಬಾಧ್ಯಸ್ತರು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂಬುದು ನಮ್ಮ ಹಕ್ಕೊತ್ತಾಯ ಎಂದರು.

ಕೃಷಿ ವಲಯಕ್ಕೆ ಸಂಬಂಧಿಸಿದ ನೀತಿಗಳನ್ನು ನಿರೂಪಿಸುವಾಗ ರೈತ ಪ್ರತಿನಿಧಿಗಳ ನಡುವೆ ಸಮಾಲೋಚನೆಗಳು ನಡೆಯದೆ ಇರುವ ಹಿನ್ನೆಲೆಯಲ್ಲಿ ಕುಲಾಂತರಿ ಅಥವಾ ಕೃಷಿಯಲ್ಲಿ ಜೈವಿಕ ತಂತ್ರಜ್ಞಾನದ ವಿಷಯಕ್ಕೆ ಸಂಬಂಧಿಸಿದಂತೆ ನಡೆಯುವ ಸಮಾಲೋಚನಾ ಸಭೆಗಳು ಹೆಚ್ಚಿನ ಮಹತ್ವ ಪಡೆಯುತ್ತವೆ. ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ತರುವ ಬಗ್ಗೆ ರಾಷ್ಟ್ರೀಯ ಜೈವಿಕ ಸುರಕ್ಷತಾ ನೀತಿ ರಚಿಸಿ ಸಾರ್ವಜನಿಕ ಸಮಾಲೋಚನೆ ನಡೆಸಬೇಕು. ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ನೇತೃತ್ವದಲ್ಲಿ ರಾಜ್ಯ ಸರ್ಕಾರ, ರೈತ ಪ್ರತಿನಿಧಿಗಳು, ಪರಿಸರವಾದಿಗಳೊಂದಿಗೆ ಚರ್ಚಿಸಿ ಭಾರತದ ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ಅಗತ್ಯದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಕಾಯ್ದೆ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದು ಹೇಳಿದರು.

Advertisements
WhatsApp Image 2024 09 26 at 8.18.01 PM

ಆಹಾರ ಪದ್ಧತಿ ಹಾಗೂ ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ತರಬೇಕೆಂದು ಕೆಲ ಬಂಡವಾಳಶಾಹಿಗಳು ಹುನ್ನಾರ ನಡೆಸುತ್ತಿದ್ದಾರೆ. ಕುಲಾಂತರಿ ತಂತ್ರಜ್ಞಾನ ಎನ್ನುವುದು ಪ್ರಾಣಿ- ಪಕ್ಷಿಗಳ ಜೀವಸತ್ವ ಹೊರತೆಗೆದು ಸಸ್ಯಗಳ ಮೇಲೆ ಪ್ರಯೋಗ ಮಾಡುವ ಪಿತೂರಿ. ಇದಕ್ಕೆ ಜಾಗತಿಕವಾಗಿ ಮುಂದುವರಿದ ದೇಶಗಳು ವಿರೋಧ ವ್ಯಕ್ತಪಡಿಸಿವೆ. ಕುಲಾಂತರಿ ತಂತ್ರಜ್ಞಾನ ಪದ್ಧತಿಯ ಆಹಾರ ಸೇವನೆಯಿಂದ ಮನುಷ್ಯ ಹಾಗೂ ಜೀವಸಂಕುಲದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಪರಿಸರದ ಅವನತಿಯೂ ಆಗಲಿದೆ. ಆದ್ದರಿಂದ ಈ ಪದ್ಧತಿ ತಿರಸ್ಕರಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕೆ ಟಿ ಗಂಗಾಧರ್ ತಿಳಿಸಿದರು.

ಇದನ್ನು ಓದಿದ್ದೀರಾ? ರಾಜ್ಯ ರಾಜಕಾರಣದಲ್ಲಿ BJP-RCB (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಹೊಸ ಆಟ!

ಪ್ರತಿಭಟನೆಯ ಬಳಿಕ ರೈತರ ಮನವಿಯನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೂಲಕ ನೀಡಲಾಯಿತು.

ಪ್ರತಿಭಟನೆಯಲ್ಲಿ ಪ್ರಮುಖರಾದ ಯಶವಂತರಾವ್‌ ಘೋರ್ಪಡೆ, ಗಿರೀಶ್ ಮಾಳೇನಹಳ್ಳಿ, ಜಗದೀಶ್ ನಾಯಕ್, ಮಂಜುನಾಥ್‌, ಹಾಲೇಶಪ್ಪ ಗೌಡ್ರು, ಈರಣ್ಯ ಪ್ಯಾಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X