ರಾಯಚೂರು | ಸರ್ಕಾರಿ ಭೂಮಿ ಕಬಳಿಸಿ, ಬಿಜೆಪಿ ಮುಖಂಡನಿಂದ ಅಕ್ರಮ ಮಾರಾಟ: ಮಹಾವೀರ್ ಆರೋಪ

Date:

Advertisements

ರಾಯಚೂರು ನಗರದ ಬೋಳಮಾನದೊಡ್ಡಿ ರಸ್ತೆಯ ಆಶೀರ್ವಾದ ಲೇಔಟ್ ಸೇರಿದಂತೆ ಹಲವು ಕಡೆ ಸರ್ಕಾರಿ ಭೂಮಿಯನ್ನು ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ವಿಶೇಷ ಭೂ ನ್ಯಾಯಾಲಯದ ಮಂಡಳಿಗೆ ದೂರು ನೀಡಲಾಗುವುದು ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್ ಮಹಾವೀರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶೀರ್ವಾದ ಲೇಔಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರು 18 ಜನ ನಿವೇಶನದಾರರಿಗೆ ವಾಪಸ್ ನೀಡಬೇಕು ಎಂದು ಆದೇಶ ಮಾಡಿದ್ದಾರೆ. ರವೀಂದ್ರ ಜಲ್ದಾರ್ ಅವರು ಸರ್ವೆ ನಂಬರ್ 889/2/ಎ, 932, 897/1,3,4 ಹಾಗೂ 990 ಮತ್ತು 901ನ ಸರ್ಕಾರಿ ಭೂಮಿಯನ್ನು ಗೂಂಡಾ ಪ್ರವೃತ್ತಿಯಿಂದ ನಿವೇಶನ ಕಬಳಿಸಿ ಮನಬಂದಂತೆ ಮಾರಾಟ ಮಾಡಿದ್ದಾರೆ. ಮೂಲ ನಿವೇಶನದಾರರಿಗೆ ನ್ಯಾಯಾಧೀಶರು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ರವೀಂದ್ರ ಜಲ್ದಾರ್ ಅವರು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಐಟಿ ಮತ್ತು ಇ.ಡಿಗೆ ದಾಖಲೆ ಸಮೇತ ದೂರು ನೀಡಿದರೂ ಇದುವರೆಗೆ ಸಮರ್ಪಕ ತನಿಖೆ ನಡೆಸಿಲ್ಲ. ರೇಡಿಯೋ ಸ್ಟೇಶನ್ ಬಳಿಯ ಸ್ಮಶಾನದ ಬಳಿ ಅಕ್ರಮವಾಗಿ ತರಕಾರಿ ಮಾರುಕಟ್ಟೆ ನಡೆಸಿ ನಗರಸಭೆಯ ಆದಾಯಕ್ಕೆ ಕೊಕ್ಕೆ ಇಡುತ್ತಿದ್ದಾರೆ. ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಸಚಿವ ಎನ್ ಎಸ್ ಬೊಸರಾಜು ಅವರ ಕೃಪಕಟಾಕ್ಷದಿಂದ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

Advertisements

ಇದನ್ನು ಓದಿದ್ದೀರಾ? ಬಳ್ಳಾರಿ | ಎರಡು ವರ್ಷದ ಮಗುವಿಗೆ ಲಿವರ್ ಸಮಸ್ಯೆ: ದಾನಿಗಳ ನೆರವಿಗಾಗಿ ಕಾಯುತ್ತಿರುವ ಪೋಷಕರು

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಪ್ರಭು ನಾಯಕ, ರಿಜ್ವಾನ್, ಬಸವರಾಜ, ಕೆ.ವಿ ಖಾಜಪ್ಪ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X